Breaking News

ಕೆ.ಆರ್.ಎಸ್ ಜಲಾಶಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ : ಮುರುಗೇಶ್ ನಿರಾಣಿ

Spread the love

ಬೆಂಗಳೂರು : ಅಕ್ರಮ ಗಣಿಗಾರಿಕೆ ವಿಚಾರವಾಗಿ ನಾನೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಕೆ ಆರ್ ಎಸ್ ಜಲಾಶಯಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಸುಮಲತಾ ಅಂಬರೀಶ್ ಭೇಟಿ ಬಳಿಕ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ.

ಮೂರು ತಿಂಗಳಿನಿಂದ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಹೇಳಿದ್ದಾರೆ. ಆದ್ರೆ ಅಲ್ಲಿ ಮೂರು ತಿಂಗಳಿಂದ ಗಣಿಗಾರಿಕೆ ನಡೆಯುತ್ತಿಲ್ಲ. ಹೀಗಾಗಿ ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡಲಾಗುತ್ತದೆ ಎಂದು ಸಚಿವ ನಿರಾಣಿ ಹೇಳಿಕೆ ನೀಡಿದ್ದಾರೆ.

ಇನ್ನು ಸಚಿವರ ಭೇಟಿ ಬಳಿಕ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಹಲವು ವಿಷಯ ಪ್ರಸ್ತಾಪಿಸಿದ್ದೇನೆ. ನಾನು ಭೇಟಿ ನೀಡಿದಾಗ ಸ್ಥಳೀಯರು ನೀಡಿದ ಅಭಿಪ್ರಾಯ ತಿಳಿಸಿದ್ದೇನೆ ಎಂದರು.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ