ಗೋಕಾಕ: ಸೌಭಾಗ್ಯ ಲಕ್ಷ್ಮೀ ಶುಗರ್ಸ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ನಾವು ರೈತ ಬಾಂಧವರಿಗೆ ತಿಳಿಸುವುದು ಏನೆಂದರೆ ಈ ವರ್ಷ ನಾವು ನಮ್ಮ ಕಾರ್ಖಾನೆಗೆ ಕಬ್ಬು ಕಳುಹಿಸಿದ ಎಲ್ಲಾ ರೈತ ಬಾಂಧವರಿಗೆ ಪ್ರತಿ ಟನ್ ಗೆ ಅರ್ಧ ಕೇಜಿಯಂತೆ ಸಕ್ಕರೆ ವಿತರಿಸುವ ಕಾರ್ಯಕ್ರಮವನ್ನಾ ಯರಗಟ್ಟಿ, ಗೋಕಾಕ, ಹಾಗೂ ಮಮದಾಪೂರ ಈ ರೀತಿ ಮೂರು ವಿಭಾಗಗಳಾಗಿ ವಿಂಗಡಿಸಿ
ಈ ಮೂರು ಝೋನ್ ಗಳಲ್ಲಿ ಸಕ್ಕರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ರೈತರು ಬರುವಾಗ ತಮ್ಮ ಕಬ್ಬಿನ ರಸೀದಿಯನ್ನು ಹಾಗೂ ಚೀಲವನ್ನು ಕೂಡ ತೆಗೆದುಕೊಂಡು ಬರಬೇಕು ಎಂದು ಕಾರ್ಖಾನೆ ಸೂಚಿಸಿದೆ.
ಇನ್ನು ಕೋವಿಡ ಇರುವ ಕಾರಣ ದಿಂದಾಗಿ ಎಲ್ಲರೂ ದಯವಿಟ್ಟು ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಿ ಇದರ ಫಲಾನುಭವಿಗಳು ಇದರ ಲಾಭ ಪಡೆದುಕೊಳ್ಳಿ ಎಂದು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಜನರಲ್ ಮ್ಯಾನೇಜರ್ ತಿಳಿಸಿದ್ದಾರೆ.