Breaking News

ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ -ಚರ್ಚೆ ಸಾಧ್ಯತೆ

Spread the love

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮೇಕೆದಾಟು ಜಲಾಶಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ.

ಈಗಾಗಲೇ ಅಧಿಕಾರಿಗಳು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಿಎಮ ಚರ್ಚಿಸಲಿದ್ದಾರೆ. ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ, ಡಿಸಿಎಂ ಗೋವಿಂದ ಕಾರಜೋಳ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ದೆಹಲಿಗೆ ತೆರಳುವ ಸಾಧ್ಯತೆ ಇದೆ.

ದೆಹಲಿ ಭೇಟಿ ವೇಳೆ ಸಿಎಂ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರನ್ನು ಕೂಡ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ