Breaking News

ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧಾರವಾಡ ನಗರದ ಲಕಮನಹಳ್ಳಿ ಬಡಾವಣೆಯಲ್ಲಿ ಸುಮಾರು 10 ಎಕರೆ ಅನಧಿಕೃತ ಲೇಔಟ್‌ಗಳ ತೆರವು

Spread the love

ಧಾರವಾಡ: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಧಾರವಾಡ ನಗರದ ಲಕಮನಹಳ್ಳಿ ಬಡಾವಣೆಯಲ್ಲಿ ಸುಮಾರು 10 ಎಕರೆ ಅನಧಿಕೃತ ಲೇಔಟ್‌ಗಳನ್ನು ತೆರವುಗೊಳಿಸಲಾಯಿತು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ನೇತ್ರತ್ವದಲ್ಲಿ ನಡೆದ ಈ ಕಾರ್ಯಾಚರಣೆ ವೇಳೆ ಲೇಔಟ್ನ ಕಲ್ಲುಗಳನ್ನು, ವಿದ್ಯುತ್‌ಕಂಬಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು. ಒಂದು ವಾರದ ಹಿಂದೆ ಇದೇ ಲೇಔಟ್ ತೆರವುಗೊಳಿಸಿದ್ದರೂ ಸಹ ಪ್ಲಾಟ್ ಕಲ್ಲುಗಳನ್ನು ಹಾಕಲಾಗಿತ್ತು. ಹೀಗಾಗಿ ಇದಿಗ ಮತ್ತೆ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಟಿವಿ-9 ಡಿಜಿಟಲ್ ಜತೆ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಯಾವುದೇ ಕಾರಣಕ್ಕೆ ಇದೀಗ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸುವುದಿಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಹುಡಾ ಸದಸ್ಯರಾದ ಚಂದ್ರಶೇಖರ ಗೋಕಾಕ. ಸುನೀಲ ಮೊರೆ. ಆಯುಕ್ತ ಶ್ರೀ ಎನ್.ಹೆಚ್. ಕುಮ್ಮಣ್ಣನವರ್, ನಗರ ಯೋಜಕ ಸದಸ್ಯ ವಿವೇಕ ಕಾರೇಕರ, ಕಾರ್ಯನಿರ್ವಾಹಕ ಅಧಿಕಾರಿ ಎಂ. ರಾಜಶೇಖರ್ ಉಪಸ್ಥಿತರಿದ್ದರು.

10 ಎಕರೆಯಲ್ಲಿದ್ದ ಅನಧಿಕೃತ ಲೇಔಟ್‌ಗಳ ತೆರವು


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ