Breaking News

ಡ್ರೋನ್‌ ನಿಯಂತ್ರಣಕ್ಕೆ ಸ್ವದೇಶಿ ವ್ಯವಸ್ಥೆ : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ

Spread the love

ಹೊಸದಿಲ್ಲಿ: ಜಮ್ಮು ವಿಮಾನ ನಿಲ್ದಾಣದ ವಾಯುನೆಲೆಯ ಮೇಲೆ ಪಾಕ್‌ ಪ್ರಾಯೋಜಿತ ಡ್ರೋನ್‌ ದಾಳಿಯನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಸ್ವದೇಶಿ ಡ್ರೋನ್‌ ಪ್ರತಿರೋಧ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ.
“ರುಸ್ತುಮ್‌ಜಿ ಸ್ಮಾರಕ ಉಪನ್ಯಾಸ’ದಲ್ಲಿ ಮಾತನಾಡಿದ ಅಮಿತ್‌ ಶಾ, ಡಿಆರ್‌ಡಿಒ ಅಥವಾ ಇತರ ಸಂಸ್ಥೆಗಳು ಈ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

ನರೇಂದ್ರ ಮೋದಿ ಪ್ರಧಾನಿ ಆಗುವವರೆಗೆ ದೇಶಕ್ಕೆ ಸ್ವತಂತ್ರ ರಕ್ಷಣ ನೀತಿ ಇರಲಿಲ್ಲ. ಮೋದಿ ಚುಕ್ಕಾಣಿ ವಹಿಸಿದ ಬಳಿಕ ಅಂಥ ನೀತಿ ಸಿದ್ಧವಾಗಿದೆ. ಹಿಂದೆ ನಮ್ಮ ಭದ್ರತಾ ನೀತಿ ವಿದೇಶಗಳಿಂದ ಪ್ರಭಾವಿತ ವಾಗಿತ್ತು ಅಥವಾ ವಿದೇಶಿ ನೀತಿಗಳೊಂದಿಗೆ ಬೆಸೆದಿರುತ್ತಿತ್ತು ಎಂದು ಅಮಿತ್‌ ಶಾ ಹೇಳಿದ್ದಾರೆ.

ಎಲ್ಲ ದೇಶಗಳೊಂದಿಗೆ ಶಾಂತಿಯುತ ಸಂಬಂಧ ಹೊಂದುವುದು ನಮ್ಮ ಸ್ವಭಾವ. ಆದರೆ ಯಾರಾದರೂ ನಮ್ಮನ್ನು ಕೆಣಕಿದರೆ, ಸಾರ್ವಭೌಮತ್ವಕ್ಕೆ ಸವಾಲು ಹಾಕಿದರೆ ಅದೇ ಭಾಷೆಯಲ್ಲಿ ಉತ್ತರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭದ್ರತಾ ನೀತಿ ಬಹಳ ಮಹತ್ವದ್ದು ಎಂದು ಶಾ ಹೇಳಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ