ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಆಹಾರ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದು, ಸಿಎಂ ಹುದ್ದೆ ಖಾಲಿ ಇದ್ರೆ ನೆಕ್ಸ್ಟ್ ನಾನೇ ಇದ್ದೇನೆ ಎಂದು ಹೇಳುವ ಮೂಲಕ ಸಿಎಂ ಸ್ಥಾನದ ಆಸೆಯನ್ನು ತೇಲಿಬಿಟ್ಟಿದ್ದಾರೆ.
ಸಿಎಂ ಬದಲಾವಣೆ ಯಾರು ಮಾಡುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ಹೈಕಮಾಂಡ್ ಮನಸ್ಸು ಮಾಡಿದರೆ ಸಿಎಂ ಆಗುವ ಆಸೆಯಿದೆ ಎಂದು ಹೇಳಿದ್ದಾರೆ.