Breaking News

ಮಹಿಳೆಗೆ ಅಶ್ಲೀಲ ಉತ್ತರ ಕೊಟ್ಟ ಮೈಸೂರು ಮಹಾನಗರ ಪಾಲಿಕೆ ಜೋನಲ್​ ಅಧಿಕಾರಿಗೆ ಕಚೇರಿಯಲ್ಲೇ ಧರ್ಮದೇಟು: ವಿಡಿಯೋ ವೈರಲ್

Spread the love

ಮೈಸೂರು: ಆಶ್ರಯ ಮನೆಗಾಗಿ ವಾಸ ದೃಢೀಕರಣ ಪತ್ರ ಕೇಳಿದ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ (Mysuru City Corporation) ಜೋನಲ್ ಅಧಿಕಾರಿಗೆ ಮಹಿಳೆಯರು ಧರ್ಮದೇಟು ನೀಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜೋನಲ್ ಅಧಿಕಾರಿ ವಿಷಕಂಠೇಗೌಡ ಎನ್ನುವವರು ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿದ ಆರೋಪ ಎದುರಿಸುತ್ತಿದ್ದು, ಅವರ ವರ್ತನೆಯಿಂದ (Misbehave) ಕುಪಿತರಾದ ಮಹಿಳೆಯರು ಶಾರದಾದೇವಿ ನಗರದ ವಲಯ ಕಚೇರಿಗೆ ನುಗ್ಗಿ ಥಳಿಸಿದ ವಿಡಿಯೋ ಇದೀಗ ವೈರಲ್ (Viral Video) ಆಗಿದೆ.

ಮೈಸೂರು ಮಹಾನಗರ ಪಾಲಿಕೆಯ ಜೋನಲ್ ಅಧಿಕಾರಿ ವಿಷಕಂಠೇಗೌಡ ಹಲ್ಲೆಗೊಳಗಾದ ಅಧಿಕಾರಿಯಾಗಿದ್ದು, ಅವರ ಮೇಲೆ ಮಹಿಳೆಯರು ಗಂಭೀರ ಆರೋಪ ಹೊರಿಸಿದ್ದಾರೆ. ಆಶ್ರಯ ಮನೆಗಾಗಿ ವಾಸ ಧೃಡಿಕರಣ ಪತ್ರಕ್ಕೆ‌ ಮನವಿ ಮಾಡಿದ್ದ ಮಹಿಳೆಯೊಂದಿಗೆ ವಿಷಕಂಠೇಗೌಡ ಅಸಭ್ಯ ಹಾಗೂ ಅಶ್ಲೀಲ ಮಾತುಗಳನ್ನಾಡಿದ್ದರು ಎಂದು ಹೇಳಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಶಾರದಾ ದೇವಿ ನಗರ ವಲಯ ಕಚೇರಿಯಲ್ಲಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ನಂತರ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VIDEO CREDITS TO TV9 KANNADA-


Spread the love

About Laxminews 24x7

Check Also

ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ

Spread the love ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ ಖಾನಾಪೂರ ತಾಲೂಕಿನ ಗುಂಜಿ ಬಳಿಯಿರುವ ಕಿರಾವಾಳೆಯ ಪ್ರಸಿದ್ಧ ಗೋರಕ್ಷನಾಥ ಮಠದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ