Breaking News
Home / ರಾಜಕೀಯ / ಲಂಚ ಸ್ವೀಕಾರ : ಯಾದಗಿರಿ ಜಿಲ್ಲೆಯ ಭ್ರಷ್ಟ ಭೂಮಾಪಕ ಎಸಿಬಿ ಬಲೆಗೆ

ಲಂಚ ಸ್ವೀಕಾರ : ಯಾದಗಿರಿ ಜಿಲ್ಲೆಯ ಭ್ರಷ್ಟ ಭೂಮಾಪಕ ಎಸಿಬಿ ಬಲೆಗೆ

Spread the love

ಯಾದಗಿರಿ: ಜಿಲ್ಲೆಯ ಹುಣಸಗಿ ಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಭೂಮಾಪಕ ನ ಲಂಚಾವತಾರ ಬಯಲು ಮಾಡಿದ್ದಾರೆ.

ಪಟ್ಟಣದ ಕಕ್ಕೇರಿ ಕ್ರಾಸ್ ಹತ್ತಿರ ರೋಡಿನಲ್ಲಿ ಸರ್ವೇಯರ್ ರವಿಕುಮಾರ್ ಬನಹಟ್ಟಿಯ ಮಹಾದೇವಪ್ಪ ಬಾಗನಗೌಡ ಬಡಿಗೇರ್ ಇವರ ಹೊಲ ಸರ್ವೆ ನಂಬರ್.53 ನೇದ್ದರ 12 ಎಕರೆ ಭೂಮಿಯಲ್ಲಿ 4 ಎಕರೆ 30 ಗುಂಟೆ ಪ್ರತ್ಯೇಕ ಮಾಡಿ ಸರ್ವೆ ಮಾಡುವ ವಿಷಯದಲ್ಲಿ 2,50,000/- ರೂ ಲಂಚದ ಹಣ ಪಡೆಯುತ್ತಿರುವಾಗ ಸಿಕ್ಕಿಬಿದ್ದಿದ್ದಾನೆ.

ಕಲಬುರಗಿ ಎಸಿಬಿ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣವರ್ ಮತ್ತು ಯಾದಗಿರಿ ಡಿ ವೈಎಸ್ಪಿ ಉಮಾ ಶಂಕರ್, ಪಿಐ ಬಾಬಾಸಾಬ ಪಟೇಲ್, ಗುರುಪಾದ ಬಿರಾದಾರ್ ಸಿಬ್ಬಂದಿಯೊಂದಿಗೆ ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ