ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ.
ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಮಂಗಳೂರಿಗೆ ತೆರಳಲಿದ್ದಾರೆ.
ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ.
Laxmi News 24×7