Breaking News

ತಡರಾತ್ರಿ ಸ್ವಗ್ರಾಮಕ್ಕೆ ಬಂದ ಗದಗ ಯೋಧನ ಮೃತದೇಹ.. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Spread the love

ಗದಗ: ಛತ್ತೀಸ್​ಘಡದಲ್ಲಿ ನಕ್ಸಲರೊಂದಿಗೆ ಹೋರಾಡುತ್ತಾ ಹುತಾತ್ಮನಾದ ಯೋಧನ ಅಂತ್ಯಕ್ರಿಯೆ ತಡರಾತ್ರಿ ಗದಗ ಜಿಲ್ಲೆಯ ಸ್ವಗ್ರಾಮ ಗೊಜನೂರಿನಲ್ಲಿ ನಡೆದಿದೆ.

 

 

ನಕ್ಸಲರೊಂದಿಗೆ ಹೋರಾಡುವಾಗ ಗುಂಡು ತಗುಲಿ ಎರಡು ದಿನಗಳ ಹಿಂದೆ ಯೋಧ ಲಕ್ಷ್ಮಣ ಗೌರಣ್ಣವರ್ (30) ಹುತಾತ್ಮರಾಗಿದ್ದರು.. ರಾತ್ರಿ 11 ಗಂಟೆ ಸುಮಾರಿಗೆ ಪಾರ್ಥಿವ ಶರೀರ ಗ್ರಾಮಕ್ಕೆ ಬಂದಿದ್ದು ತಡರಾತ್ರಿ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗಿದೆ. ಪಾರ್ಥಿವ ಶರೀರ ಗ್ರಾಮಕ್ಕೆ ಬರುತ್ತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.. ಯೋಧನ ಸಾವಿಗೆ ಇಡೀ ಗ್ರಾಮಕ್ಕೆ ಗ್ರಾಮವೇ ಕಂಬಿನಿ ಮಿಡಿದಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ