Breaking News

ಬೆಳಗಾವಿ: ಕೃಷ್ಣೆಗೆ 1.56 ಲಕ್ಷ ಕ್ಯುಸೆಕ್ ನೀರು, ಪ್ರವಾಹ ಭೀತಿ ಹೆಚ್ಚಳ

Spread the love

ಬೆಳಗಾವಿ: ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶ ಮತ್ತು ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನದಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ ನದಿಗೆ 1.56 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರೊಂದಿಗೆ ತೀರದಲ್ಲಿ ಪ್ರವಾಹ ಭೀತಿಯೂ ಹೆಚ್ಚಾಗ ತೊಡಗಿದೆ.

ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸದಲಗಾ-ಬೋರಗಾಂವ ಸೇತುವೆ ಮುಳುಗಡೆಯಾಗಿದೆ. ಕೊಯ್ನಾ ಜಲಾಶಯದಿಂದ ಹೊರಬಿಡಲಾದ 10ಸಾವಿರ ಕ್ಯುಸೆಕ್, ದೂಧ್‌ಗಂಗಾ ನದಿಯಿಂದ 34,320 ಕ್ಯುಸೆಕ್ ಮತ್ತುಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಬರುತ್ತಿರುವ 1.21 ಲಕ್ಷ ಕ್ಯುಸೆಕ್ ಸೇರಿ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1.56 ಲಕ್ಷ ಕ್ಯುಸೆಕ್ ನೀರು ಸೇರುತ್ತಿದೆ.


Spread the love

About Laxminews 24x7

Check Also

ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

Spread the loveಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ