Breaking News

ಸಿಎಂ ಬಿಎಸ್​ವೈ ಕಡೆಯಿಂದ ಕೊಡಲಾದ ಲಕೋಟೆ​ಯಲ್ಲೇನಿತ್ತು?; ಸ್ವಾಮೀಜಿಯೊಬ್ಬರಿಂದ ಸ್ಪಷ್ಟನೆ ಹೊರಬಿತ್ತು..

Spread the love

ಬೆಂಗಳೂರು: ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರನ್ನು ಸ್ವಾಮೀಜಿಗಳನೇಕರು ಭೇಟಿಯಾಗಿ, ಬೆಂಬಲ ಸೂಚಿಸಿದ್ದ ಸಂದರ್ಭದ ದೃಶ್ಯಾವಳಿಯೊಂದು ಬಹಳಷ್ಟು ಕಡೆ ಹರಿದಾಡಿತ್ತು. ಸಿಎಂ ಭೇಟಿ ವೇಳೆ ಎಲ್ಲ ಸ್ವಾಮೀಜಿಗಳಿಗೂ ಒಂದು ಲಕೋಟೆ ಕೊಡಲಾಗಿದ್ದು, ಆ ಬಗ್ಗೆ ಹಲವರು ಹಲವಾರು ರೀತಿಯಲ್ಲಿ ಪ್ರತಿಕ್ರಿಯಿಸಿದ್ದರಿಂದ ಆ ವಿಡಿಯೋ ಸಾಕಷ್ಟು ಹಂಚಿಕೆ ಆಗಿತ್ತು. ಇದೀಗ ಆ ಕುರಿತು ಸ್ವಾಮೀಜಿಯೊಬ್ಬರು ಮಾತನಾಡಿದ್ದಾರೆ.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮ್ಮೇಳನದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಕಾಣಿಕೆ ಕೊಡುವುದು ಸಂಸ್ಕಾರ, ತೆಗೆದುಕೊಳ್ಳುವುದು ಧರ್ಮ. ನಾಡಿನ ಜನತೆಗಾಗಿ ಕಾಣಿಕೆ ತೆಗೆದುಕೊಳ್ಳುತ್ತೇವೆ. ವಿರೋಧ ಮಾಡುವವರು ಸಂಸ್ಕಾರ ಇರದವರು. ಅಷ್ಟಕ್ಕೂ ಅಂದು ಕೊಟ್ಟ ಲಕೋಟೆಯಲ್ಲಿ ಏನಿತ್ತು ಎಂಬುದು ಗೊತ್ತಿಲ್ಲ. ಆದರೆ ನಾವು ಯಾರಿಗೂ ಮಾರಾಟವಾಗಿಲ್ಲ ಎಂದು ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ