Breaking News

ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ

Spread the love

ಬೆಂಗಳೂರು : ಇಂದು ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಪರಮಾಣ ವಚನ ಸ್ವೀಕರಿಸಿದ್ದಾರೆ. ಇಂತಹ ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ

 

ಈ ಕುರಿತಂತೆ ರಾಜಭವನದಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಮಾಜಿ ಸಚಿವ ಆರ್ ಅಶೋಕ್, ಇಂದು ಸಂಜೆ ನೂತನ ಸಿಎಂ ಆದಂತ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ ಎಂದರು.

ಹೀಗೆ ದೆಹಲಿ ಪ್ರವಾಸ ಮುಗಿಸಿ ವಾಪಾಸ್ ಬಂದ ನಂತ್ರ, ಸಂಪುಟ ರಚನೆ ಕಾರ್ಯಗಳು ಆರಂಭವಾಗಲಿವೆ. ಹಿರಿಯರನ್ನು ಸಂಪುಟದಿಂದ ಕೈಬಿಟ್ಟು, ಹೊಸಬರಿಗೆ ಅವಕಾಶ ನೀಡುವಂತ ಯಾವುದೇ ಪ್ರಸ್ತಾಪವಾಗಿಲ್ಲ. ಹಿರಿತನವನ್ನು ಪರಿಗಣಿಸಿಯೇ ಬಿಜೆಪಿಯಲ್ಲಿ ಸಚಿವ ಸ್ಥಾನ ನೀಡುವ ಕಾರ್ಯ ನಡೆಯಲಿದೆ ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ