Home / ಜಿಲ್ಲೆ / ಬೆಂಗಳೂರು / ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

Spread the love

ಬೆಂಗಳೂರು: ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿದ್ದಾರೆ. ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನೀರಿಕ್ಷೆ ಹೆಚ್ಚಿಸುವಂತೆ ಮಾಡಿದೆ.

ಸಿಎಂ ಬೊಮ್ಮಾಯಿ ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲು ತಾನು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಅದಲ್ಲದೆ ಇಂದು ಮಧ್ಯಾಹ್ನ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದ ಸಮಸ್ಯೆಗಳ ಕುರಿತು ಸಂಸದರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಸಿಎಂ ದೆಹಲಿ ಭೇಟಿ ಸಹಜವಾಗಿಯೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟುರುವವರಿಗೆ ಕುತೂಹಲ ಹೆಚ್ಚಿಸುವಂತೆ ಮಾಡಿದೆ. ಸಚಿವ ಸಂಪುಟ ಪಟ್ಟಿಗೆ ಇಂದೇ ವರಿಷ್ಠರ ಒಪ್ಪಿಗೆ ಸಿಗುತ್ತದೆಯೇ ಎಂದು ಕಾದು ನೋಡಬೇಕಿದೆ.

ಆದರೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಂಪುಟ ರಚನೆ ವಿಚಾರ ಮೊದಲ ಭೇಟಿಯಲ್ಲೇ ಚರ್ಚೆ ಮಾಡುವುದಿಲ್ಲ. ಮುಂದಿನ ಭೇಟಿಯಲ್ಲಿ ಚರ್ಚೆ ಮಾಡುತ್ತೇನೆ” ಎಂದು ಹೇಳಿದ್ದಾರೆ.

 

Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ