Breaking News

ಬೆಳಗ್ಗೆ ಕಿಡ್ನ್ಯಾಪ್​ ಆಗಿದ್ದ ಉದ್ಯಮಿಯನ್ನ 5 ಗಂಟೆಯಲ್ಲೇ ರಕ್ಷಣೆ ಮಾಡಿದ ಪೊಲೀಸ್​

Spread the love

ಧಾರವಾಡ: ಜಿಲ್ಲೆಯ ಹಾಡುಗಲೇ ಮೂವರು ದುಷ್ಕರ್ಮಿಗಳು ಉದ್ಯಮಿಯೊಬ್ಬರನ್ನು ಅಪಹರಣವಾದ ಮಾಡಿದ್ದ ಘಟನೆ ನಗರದಲ್ಲಿ ನಡೆದಿದ್ದು, ಘಟನೆ ನಡೆದ ಐದು ಗಂಟೆಯಲ್ಲೇ ಪೊಲೀಸರು ಉದ್ಯಮಿಯನ್ನು ರಕ್ಷಣೆ ಮಾಡಿದ್ದಾರೆ.

ನಗರದ ಬೃಂದಾವನ ಡೆವಲಪರ್ಸ್​​ ಮಾಲೀಕರಾಗಿರುವ ಉದ್ಯಮಿ ಶ್ರಿನಿವಾಸ್ ನಾಯ್ಡು ಅವರನ್ನು ಧಾರವಾಡದ ವಿದ್ಯಾಗಿರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಬೆಳಗ್ಗೆ 11 ಗಂಟೆ ಸಮಯದಲ್ಲಿ ಕಿಡ್ನಾಪ್​ ಮಾಡಿದ್ದರು. ಕೂಡಲೇ ಅಪಹರಣವಾದ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗಿಳಿದ ಪೊಲೀಸರು ಸಂಜೆ 5 ಗಂಟೆ ವೇಳೆಗೆ ಉದ್ಯಮಿಯನ್ನ ರಕ್ಷಣೆ ಮಾಡಿದ್ದಾರೆ. ತಾಲೂಕಿನ ದೇವರ ಹುಬ್ಬಳ್ಳಿಯಲ್ಲಿ ಉದ್ಯಮಿಯನ್ನು ರಕ್ಷಣೆ ಮಾಡಿದ್ದು, ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮಿಷನರ್ ಲಾಬುರಾಮ್ ಭೇಟಿ ನೀಡಿ ಉದ್ಯಮಿಯಿಂದ ಕಿಡ್ನಾಪರ್​​​ಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ