Breaking News

ಡಿಸಿಪಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಭೆ

Spread the love

ಬೆಂಗಳೂರು, ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನದಟ್ಟಣೆ ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಇಂದು ಎಲ್ಲಾ ವಿಭಾಗದ ಡಿಸಿಪಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ಕೋವಿಡ್ ನಿಯಮ ಪಾಲಿಸದೆ ಜನರು ಮಾರುಕಟ್ಟೆ, ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಬಗ್ಗೆ ಪೊಲೀಸರು ತೆಗೆದುಕೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಆಯುಕ್ತರು ಚರ್ಚಿಸಿದರು. ರಾಜಧಾನಿ ಬೆಂಗಳೂರಿಗೆ ಮತ್ತೆ ಕೊರೊನಾ ಕಂಟಕ ಎದುರಾಗಲಿದೆಯೇ ಎಂಬ ಭೀತಿ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜನದಟ್ಟಣೆಯನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಆಯುಕ್ತರು ಸಭೆ ನಡೆಸಿ ಪೊಲೀಸರಿಗೆ ಸಲಹೆ ಸೂಚನೆ ನೀಡಿದರು.

ಆಷಾಢ ಮಾಸ ಮುಗಿಯುತ್ತಿದ್ದಂತೆ ಶ್ರಾವಣ ಆರಂಭವಾಗಲಿದ್ದು, ಹಬ್ಬ, ಮದುವೆ, ಸಭೆಸಮಾರಂಭಗಳು ಹೆಚ್ಚಾಗಿ ನಡೆಯುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಗಳಿಗೆ ಜನ ಸೇರುವುದನ್ನು ನಿಯಂತ್ರಿಸುವ ಬಗ್ಗೆಯೂ ಸಹ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಯಿತು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ