Breaking News

ಪ್ರವಾಸಿಗರಿಗೆ ಸುರಕ್ಷತೆಯ ಕೊರತೆ

Spread the love

ರಬಕವಿ ಬನಹಟ್ಟಿ: ತಾಲ್ಲೂಕಿನ ಹಿಪ್ಪರಗಿ ಜಲಾಶಯ ಈಗ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪ್ರತಿನಿತ್ಯ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಅಥಣಿ ತಾಲ್ಲೂಕಿನ ನೂರಾರು ಜನರು ವೀಕ್ಷಣೆ ಮಾಡಲು ಬರುತ್ತಿದ್ದಾರೆ.

ಆದರೆ ಜಲಾಶಯದ ಸುತ್ತಮುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದರಿಂದ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ವೀಕ್ಷಣೆ ಮಾಡಲು ಬಂದ ಜನರು ಜಲಾಶಯದ ಎಲ್ಲ ಕಡೆಗೂ ಓಡಾಡುತ್ತಾರೆ. ಇಲ್ಲಿ ಹಾಕಲಾದ ಕಬ್ಬಿಣ ಸಲಾಕೆಯ ತಡೆಗೋಡೆಗಳು ಬಹಳಷ್ಟು ಚಿಕ್ಕದಾಗಿವೆ. ಜನರು ಇವುಗಳ ಮೇಲೆ ಕುಳಿತುಕೊಂಡು ಫೋಟೊ ಮತ್ತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಅದೇ ರೀತಿಯಾಗಿ ಚಿಕ್ಕ ಮಕ್ಕಳನ್ನು ನದಿಯ ಹತ್ತಿರಕ್ಕೆ ಕರೆದುಕೊಂಡು ಹೋಗುತ್ತಾರೆ. ಈ ಸಲಾಕೆಗಳು ಕೂಡಾ ಬಹಳಷ್ಟು ಹಳೆಯದಾಗಿವೆ ಮತ್ತು ತುಕ್ಕು ಹಿಡಿದಿವೆ.

ಗೇಟ್‍ಗಳನ್ನು ಹಾಕುವ ಮತ್ತು ತೆಗೆಯುವ ಯಂತ್ರದ ಸೇತುವೆಯ ಮೇಲೆಯೂ ಜನರು ಹೋಗುತ್ತಾರೆ. ಇಲ್ಲಿ ಹೋಗದಂತೆ ಯಾವುದೇ ನಿರ್ಬಂಧ ಇಲ್ಲವಾಗಿವೆ.
ಆದ್ದರಿಂದ ಯಾವುದೇ ಅಪಾಯ ಸಂಭವಿಸುವುದಕ್ಕಿಂತ ಮೊದಲು ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನ ನೀಡಿ ಹಿಪ್ಪರಗಿ ಜಲಾಶಯದಲ್ಲಿ ಸುರಕ್ಷತೆಯ ಕ್ರಮಗಳನ್ನು ತೆಗೆದುಕೊಳ‍್ಳಬೇಕಾಗಿದೆ ಎನ್ನುತ್ತಾರೆ ಸ್ಥಳೀಯರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ