Breaking News
Home / ಜಿಲ್ಲೆ / ಬೆಳಗಾವಿ / ನನಗೆ ಕಾಲ್ ಬಂದಿಲ್ಲ‌ ಸಚಿವ ಸ್ಥಾನ ಸಿಗದಿದ್ದರೆ ಬಂಡಾಯ : ಆನಂದ ಮಾಮನಿ

ನನಗೆ ಕಾಲ್ ಬಂದಿಲ್ಲ‌ ಸಚಿವ ಸ್ಥಾನ ಸಿಗದಿದ್ದರೆ ಬಂಡಾಯ : ಆನಂದ ಮಾಮನಿ

Spread the love

ಬೆಳಗಾವಿ- ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕ್ಯಾಬಿನೆಟ್ ರಚನೆ ಆಗಲಿದೆ.ನನಗೆ ಕಾಲ್ ಬಂದಿಲ್ಲ‌.ಈ ಕುರಿತು ಬಿ ಎಸ್ ವೈ ಜೊತೆ ಮಾತನಾಡುವೆ,ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ಶಾಸಕ ಆನಂದ ಮಾಮನಿ ಹೇಳಿದ್ದಾರೆ.

ಹೊಸ ಮುಖ್ಯಮಂತ್ರಿಯ ಹೊಸ ಕ್ಯಾಬಿನೆಟ್ ಗೆ ಬೆಳಗಾವಿ ಜಿಲ್ಲೆಯಿಂದಲೇ ಬಂಡಾಯ ಶುರುವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ಪಟ್ಟಿಯೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು ಪತ್ರಿಕಾಗೋಷ್ಢಿ ನಡೆಸಿ,ಇಂದು ಪ್ರಮಾಣವಚನ ಸ್ವೀಕಾರ ಮಾಡಲಿರುವ ಸಚಿವರ ಹೆಸರುಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.ತದನಂತರ ಬಹಳಷ್ಟು ಜನ ಶಾಸಕರು ಬಂಡಾಯ ಏಳುವ ಸಾಧ್ಯತೆ ಇದೆ.

ವಿಧಾನಸಭೆಯ ಉಪ ಸಭಾಪತಿ ನನಗೆ ಕಾಲ್ ಬಂದಿಲ್ಲ ಎಂದು ಸಿಟ್ಟಾಗಿದ್ದಾರೆ‌.ಮಂತ್ರಿ ಸ್ಥಾನ ಸಿಗದಿದ್ದರೆ,ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡಿ,ಬೆಂಬಲಿಗರ ಜೊತೆ ಸಮಾಲೋಚನೆ ಮಾಡಿ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಆನಂದ ಮಾಮನಿ ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ