Breaking News
Home / ರಾಜಕೀಯ / ಹೊಸ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್..! , 13 ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ದೊರೆತಿಲ್ಲ.

ಹೊಸ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್..! , 13 ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ದೊರೆತಿಲ್ಲ.

Spread the love

ಬೆಂಗಳೂರು, ಆ.4- ಬೊಮ್ಮಾಯಿ ಸಂಪುಟದಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ಸಿಕ್ಕಿದೆ. ಸಂಪುಟದಲ್ಲಿ ಏಳು ಮಂದಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ರಾಜ್ಯದ ಆರು ಜಿಲ್ಲೆಗಳಿಗೆ ತಲಾ ಎರಡು ಸಚಿವ ಸ್ಥಾನಗಳನ್ನು ನೀಡಿದರೆ ಬೆಂಗಳೂರು ನಗರ ಜಿಲ್ಲೆಗೆ 7 ಸಚಿವ ಸ್ಥಾನ ನೀಡಲಾಗಿದೆ. ಮುಂಬರುವ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು 7 ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.

ಆರ್.ಅಶೋಕ್, ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಮುನಿರತ್ನ, ವಿ.ಸೋಮಣ್ಣ, ಗೋಪಾಲಯ್ಯ , ಅಶ್ವತ್ಥನಾರಾಯಣ್ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಸುರೇಶ್‍ಕುಮಾರ್, ಅರವಿಂದ ಲಿಂಬಾವಳಿ ಅವರನ್ನು ಕೈ ಬಿಡಲಾಗಿದೆ. ಸರ್ಕಾರ ರಚನೆ ಸಂದರ್ಭದಲ್ಲಿ ಕೈ ಹಿಡಿದಿದ್ದ ಮುನಿರತ್ನ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಲಾಗಿದೆ.ಕಳೆದ ಬಾರಿ ರಾಜಧಾನಿ ಬೆಂಗಳೂರಿಗೆ 9 ಮಂದಿಗೆ ಸ್ಥಾನ ನೀಡಲಾಗಿತ್ತು. ಅದರಲ್ಲಿ ಸುರೇಶ್‍ಕುಮಾರ್, ಲಿಂಬಾವಳಿ ಅವರನ್ನು ಕೈ ಬಿಡಲಾಗಿದೆ.
ಹಾವೇರಿ, ದಕ್ಷಿಣ ಕನ್ನಡ, ಧಾರವಾಡ, ಶಿವಮೊಗ್ಗ , ತುಮಕೂರು, ಬಾಗಲಕೋಟೆ ಜಿಲ್ಲೆಗಳಿಗೆ ಡಬಲ್ ಧಮಾಕ , ಈ ಜಿಲ್ಲೆಗಳ ಇಬ್ಬರು ಶಾಸಕರುಗಳಿಗೆ ಸಚಿವ ಸ್ಥಾನ ನೀಡಲಾಗಿದೆ. 13 ಜಿಲ್ಲೆಗಳಿಗೆ ಯಾವುದೇ ಸಚಿವ ಸ್ಥಾನ ದೊರೆತಿಲ್ಲ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ