Breaking News

ಳಿನ್‌ ಕುಮಾರ್‌ ಕಟೀಲ್‌ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ

Spread the love

ಬೆಂಗಳೂರು: ನೂತನ ಸಚಿವ ಸಂಪುಟ ರಚನೆ ಬೆನ್ನಲ್ಲೆ ಬಿಜೆಪಿ ಕಚೇರಿಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ನೀಡಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಜೊತೆ ಚರ್ಚೆ ನಡೆಸಿದ್ದಾರೆ.

ನಂತರ ಮಾಧ್ಯಮಗಳೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತ ನನಗೂ ಒಳ್ಳೆಯ ಕಾಲ ಬರುತ್ತದೆ ಎಂದು ಹೇಳಿಕೊಂಡಿದ್ದಾರೆ.

ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುಮಾರು 15 ನಿಮಿಷಗಳ ಕಾಲ ನಳಿನಕುಮಾರ್‌ ಕಟೀಲ್‌ ಅವರ ಜೊತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ತಮ್ಮ ಬದಲು ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರಿದ್ದರು ಎನ್ನಲಾಗಿತ್ತು. ಆದರೆ, ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ಕೈ ಬಿಟ್ಟಿರುವುದರಿಂದ ಜಾರಕಿಹೊಳಿ ಸಹೋದರರು ಬೇಸರಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯಾಧ್ಯಕ್ಷರ ಭೇಟಿಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅನೌಪಚಾರಿಕವಾಗಿ ಮಾತನಾಡಿರುವ ರಮೇಶ್‌ ಜಾರಕಿಹೊಳಿ, ನನಗೂ ಒಳ್ಳೆಯ ಕಾಲ ಬರಲಿದೆ. ನನಗೆ ನಮ್ಮ ಕ್ಷೇತ್ರದ ಜನರು ಇದ್ದಾರೆ. ನಾನೀಗ ಪ್ರತಿದಿನ ಬ್ಯಾಡ್ಮಿಂಟನ್‌ ಆಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.


Spread the love

About Laxminews 24x7

Check Also

ಒಳಮೀಸಲಾತಿ ಕುರಿತು ಇದೆ 27ರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಆಹಾರ ಸಚಿವ:- ಕೆಹೆಚ್. ಮುನಿಯಪ್ಪ

Spread the loveಬೆಂಗಳೂರು: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ‌ ಹಾಗೂ ಅಬಕಾರಿ ಸಚಿವರಾದ ಆರ್ .ಬಿ.ತಿಮ್ಮಾಪುರ ರವರ ನೇತೃತ್ವದಲ್ಲಿ ನಿಯೊಗವು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ