Breaking News

ತಪ್ಪಿದ ಸಚಿವ ಸ್ಥಾನ; ಶಾಸಕಿ ಪೂರ್ಣಿಮಾ ಅಭಿಮಾನಿಗಳಿಂದ ಪಾದಯಾತ್ರೆ

Spread the love

ಚಿತ್ರದುರ್ಗ: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಮಾನಿಗಳು ಅಸಮಾಧಾನಗೊಂಡಿದ್ದು ಪಾದಯಾತ್ರೆ ನಡೆಸಿ ಅಸಾಮಾಧನ ಹೊರ ಹಾಕಿದ್ದಾರೆ.

 

ಶಾಸಕಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ ಅಭಿಮಾನಿಗಳು, ಧರ್ಮಪುರದಿಂದ-ಹಿರಿಯೂರು ನಗರಕ್ಕೆ ಪಾದಯಾತ್ರೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದ್ದು, ಸಾಮಾಜಿಕ ನ್ಯಾಯ, ಮಹಿಳಾ ಕೋಟಾದಡಿ ಮಂತ್ರಿಗಿರಿ ನೀಡುವಂತೆ ಆಗ್ರಹ ಪಡಿಸಿದ ಅಭಿಮಾನಿಗಳು, ಮಂತ್ರಿ ಸ್ಥಾನ ನೀಡುವುದಾಗಿ ಆಸೆ ತೋರಿಸಿ ಬೊಮ್ಮಾಯಿ ಸರ್ಕಾರ ಮೋಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಪಾದಯಾತ್ರೆಯಲ್ಲಿ ಶಾಸಕಿಯ ಅಭಿಮಾನಿಗಳು, ಸೇರಿದಂತೆ ಸಾಕಷ್ಟು ಬೆಂಬಲಿಗರು, ಗೊಲ್ಲ ಸಮುದಾಯದ ಮುಖಂಡರು, ಗ್ರಾಪಂ, ತಾಪಂ, ಜಿಪಂ ಸದಸ್ಯರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ