Breaking News

ಶ್ರೀಮಂತ ಪಾಟೀಲಗೆ ಸಚಿವ ಸ್ಥಾನ ನೀಡಲು ಆಗ್ರಹ

Spread the love

ಬೆಂಗಳೂರು: ಮರಾಠಾ ಸಮುದಾಯವನ್ನು ಪ್ರತಿನಿಧಿಸುವ ಏಕೈಕ ಶಾಸಕರಾಗಿರುವ ಶ್ರೀಮಂತ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ಕರ್ನಾಟಕ ಕ್ಷತ್ರಿಯ ಮರಾಠಾ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಒಕ್ಕೂಟದ ವತಿಯಿಂದ ಶುಕ್ರವಾರ ನಡೆದ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್‌ ಅಧ್ಯಕ್ಷ ರಾಣೋಜಿರಾವ್‌ ಸಾಠೆ, ‘ಶ್ರೀಮಂತ ಪಾಟೀಲ ಅವರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ಕಾರಣರಾದವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದಿಂದ ಅವರನ್ನು ಕೈಬಿಟ್ಟಿರುವುದರಿಂದ ಮರಾಠಾ ಸಮುದಾಯದ ಎಲ್ಲ ಜನರಿಗೂ ನೋವುಂಟಾಗಿದೆ’ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮರಾಠಾ ಸಮುದಾಯವನ್ನು ಕಡೆಗಣಿಸಲಾಗಿದೆ. ಬಸವರಾಜ ಬೊಮ್ಮಾಯಿ ಅವರು ಶ್ರೀಮಂತ ಪಾಟೀಲ ಅವರನ್ನು ತಕ್ಷಣವೇ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಮರಾಠಾ ಅಭಿವೃದ್ಧಿ ನಿಗಮ ಸ್ಥಾಪಿಸಿದರೂ, ಎಂಟು ತಿಂಗಳಿನಿಂದ ಅನುದಾನ ನೀಡಿಲ್ಲ. ಅಧ್ಯಕ್ಷರು ಮತ್ತು ನಿರ್ದೇಶಕರ ನೇಮಕಾತಿಯನ್ನೂ ಮಾಡಿಲ್ಲ. ಸಮುದಾಯವನ್ನು ಕಡೆಗಣಿಸುವುದು ಇದೇ ರೀತಿಯಲ್ಲಿ ಮುಂದುವರಿದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಕರ್ನಾಟಕ ಮರಾಠಾ ವೆಲ್‌ಫೇರ್‌ ಅಸೋಸಿಯೇಷನ್‌ ಅಧ್ಯಕ್ಷ ಮನೋಜ್‌ ಕುಮಾರ್‌, ಮರಾಠಾ ಸಮುದಾಯದ ಮುಖಂಡರಾದ ಗಣೇಶ್‌ ರಾವ್‌ ಕೇಸರ್ಕರ್‌, ಮಾರುತಿ ರಾವ್‌ ಮೋರೆ, ಕಮಲೇಶ್‌ ಪಡ್ತಾರೆ, ಪ್ರವೀಣ್‌ ಮಾನ್‌, ವೀರೂ ಫಿಶೆ, ಶೈಲೇಶ ನಾಜರೆ, ನಾಗೋಜಿರಾವ್‌ ಕರಾಡೆ, ಸತ್ಯನಾರಾಯಣ್‌ ಬಾಬಡೆ, ನಾಗರಾಜ್‌ ವನ್ಸ್ ಮತ್ತು ತುಳಸಿರಾಮ್‌ ಪತ್ರಿಕಾಗೋಷ್ಠಿಯಲ್ಲಿದ್ದರು.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ