Breaking News

ಜೋಗ: ಅಧಿಕಾರಿಗಳ ಹಾಗೂ ಪ್ರವಾಸಿಗರ ಸಂಘರ್ಷ

Spread the love

ಕಾರ್ಗಲ್: ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ದೃಢೀಕರಣ ಕಡ್ಡಾಯಗೊಳಿಸಿರುವ ಜಿಲ್ಲಾಧಿಕಾರಿ ಆದೇಶ ಶುಕ್ರವಾರ ಸಂಘರ್ಷಕ್ಕೆ ಕಾರಣವಾಗಿತ್ತು.

ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಯಿಂದ ಬಂದಿದ್ದ ಭಾರಿ ಸಂಖ್ಯೆಯ ಪ್ರವಾಸಿಗರು, ‘ಆರ್‌ಟಿಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಎಂದು ಸರ್ಕಾರ ಘೋಷಣೆ ಮಾಡಿಲ್ಲ. ಈ ಬಗ್ಗೆ ಎಲ್ಲಿಯೂ ಮುಂಚಿತವಾಗಿ ಮಾಹಿತಿ ನೀಡಿಲ್ಲ. ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುವ ಆಶಯದಿಂದ ನೂರಾರು ಕಿ.ಮೀ. ದೂರದಿಂದ ನಿರೀಕ್ಷೆಯೊಂದಿಗೆ ಬರುವ ನಮಗೆ ನಿರಾಸೆ ಮೂಡಿಸಿದಂತಾಗಿದೆ. ಮಾಹಿತಿ ಪ್ರಚುರ ಪಡಿಸದೆ ಈ ರೀತಿಯ ಕ್ರಮಕ್ಕೆ ಮುಂದಾಗಿರುವುದು ಸರಿಯಲ್ಲ’ ಎಂದು ಭದ್ರತಾ ಸಿಬ್ಬಂದಿಯೊಂದಿಗೆ ಸಂಘರ್ಷಕ್ಕಿಳಿದರು.

ಪ್ರವಾಸಿಗರೊಂದಿಗೆ ಅತ್ಯಂತ ಸಂಯಮದಿಂದ ವರ್ತಿಸಿದ ಭದ್ರತಾ ಸಿಬ್ಬಂದಿಯ ಮಾತನ್ನು ಮೀರಿ ಒಳ ಪ್ರವೇಶಿಸಲು ಪ್ರವಾಸಿಗರು ಮುಂದಾದರು.

ಕೂಡಲೇ ಮಧ್ಯೆ ಪ್ರವೇಶಿಸಿದ ಜೋಗದ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನಿರ್ಮಲಾ, ಪ್ರವಾಸಿಗರಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಿ, ಕಾನೂನು ಉಲ್ಲಂಘನೆ ಮಾಡಿದಲ್ಲಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

‘ಜೋಗಕ್ಕೆ ಬಂದಿದ್ದ ಸಾವಿರಾರು ಪ್ರವಾಸಿಗರಲ್ಲಿ 945 ಮಂದಿ ಮಾತ್ರ ಆರ್‌ಟಿಪಿಸಿಆರ್ ನೆಗಟಿವ್ ವರದಿ ಹಾಜರುಪಡಿಸಿದ ಕಾರಣ ಅವರಿಗೆ ಮಾತ್ರ ಜಲಪಾತ ಪ್ರದೇಶದ ಒಳಗೆ ಪ್ರವೇಶ ನೀಡಲಾಯಿತು’ ಎಂದು ಪ್ರವಾಸೋದ್ಯಮ ಇಲಾಖೆ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ