Breaking News

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಪಟ್ಟಿ ಬಿಡುಗಡೆ

Spread the love

ಮೈಸೂರು: ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ಕೃಷ್ಣರಾಜ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ಎನ್.ಎಂ.ನವೀನ್‌ ಕುಮಾರ್‌ ಬಿಡುಗಡೆ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಅಭಿವೃದ್ಧಿ ಕಾರ್ಯಗಳ ಪಟ್ಟಿ ಬಿಡುಗಡೆ ಮಾಡಲಾಯಿತು.
ಈ ವೇಳೆ ನವೀನ್‌ ಕುಮಾರ್‌ ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕದಲ್ಲಿ ನಡೆದಂತಹ ಅಭಿವೃದ್ಧಿ ಪರ್ವ ನ ಭೂತೋ ನ ಭವಿಷ್ಯತಿ ಎಂಬಂತಿದೆ ಎಂದು ಸ್ಮರಿಸಿದರು.

ಬಿಜೆಪಿ ಸರ್ಕಾರದವರು ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ, ಮುಂದೆಯೂ ಮಾಡಲಾರರು. ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ರೆಸಾರ್ಟ್ ರಾಜಕೀಯ, ಮಂತ್ರಿಗಿರಿಗಾಗಿ ಲಾಬಿ, ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ಮೊದಲಾದ ವಿದ್ಯಮಾನಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅವರು 5 ವರ್ಷ ನಿರಂತರವಾಗಿ ತಮ್ಮ ಸಂಪೂರ್ಣ ಅಧಿಕಾರವಧಿಯನ್ನು ಕರ್ನಾಟಕದ ಅಭಿವೃದ್ಧಿಗಾಗಿ ಮತ್ತು ಬಡಜನರ ಸೇವೆಗಾಗಿ ಮೀಸಲಿಟ್ಟಿದ್ದರು ಎಂದು ನೆನೆದರು.

ಸಮಾರಂಭದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್‌ನ ಕಾರ್ಯದರ್ಶಿ ರೇಖಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಎಂ.ರಾಜೇಶ್, ದೇವರಾಜ್ ಅರಸು ಬ್ಲಾಕ್‌ನ ಅಧ್ಯಕ್ಷ ಪೈಲ್ವಾನ್ ಸುನಿಲ್, ಬಿಂದು ಗೌಡ, ತಗಡೂರು ಬ್ಲಾಕ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್, ಅಶೋಕಪುರಂನ ಪೈಲ್ವಾನ್ ಸುರೇಶ್ ಮತ್ತಿತರರು ಹಾಜರಿದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ