Breaking News

ಸಂಸದೀಯ ಇಲಾಖೆಯ ಕಾರ್ಯದರ್ಶಿಯಾಗಿ ಜಿ. ಶ್ರೀಧರ್‌ ನೇಮಕ

Spread the love

ಬೆಂಗಳೂರು: ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಕಾರ್ಯದರ್ಶಿಯಾಗಿ ಜಿ. ಶ್ರೀಧರ್‌ ಅವರನ್ನು ನೇಮಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ದ್ವಾರಕಾನಾಥ್ ಬಾಬು ಅವರ ಅವಧಿ ಜುಲೈ 31ರಂದು ಅಂತ್ಯವಾಗಿತ್ತು.

2018ರಿಂದ ಕಾರ್ಯದರ್ಶಿ ಹುದ್ದೆ ಖಾಲಿಯಿದ್ದು, ಈ ಹುದ್ದೆಯಿಂದ ನಿವೃತ್ತರಾಗಿದ್ದ ದ್ವಾರಕಾನಾಥ್ ಬಾಬುರನ್ನೇ ಮೊದಲಿಗೆ 2 ವರ್ಷ, ಬಳಿಕ 1 ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲಾಗಿತ್ತು. ಈ ಹುದ್ದೆಗೆ ಅರ್ಹರು ಇದ್ದರೂ ಅವರನ್ನು ಮುಂದುವರಿಸಿದ ಬಗ್ಗೆ ಹಿರಿಯ ಅಧಿಕಾರಿಗಳ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಇದೀಗ, ಇಲಾಖೆಯಲ್ಲಿ ವಿಶೇಷ ಕಾರ್ಯದರ್ಶಿಯಾಗಿರುವ ಶ್ರೀಧರ್‌ ಅವರನ್ನು ಖಾಲಿ ಹುದ್ದೆಗೆ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ