Breaking News

ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು

Spread the love

ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ (ಟ್ರಸ್ಟ್) ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

 

ಕೊರೋನಾ ಮಹಾಮಾರಿ ತಡೆಗಟ್ಟಲು ಸರಕಾರದ ನಿಯಮಗಳನ್ನು ಪಾಲಿಸುವ ಸಲುವಾಗಿ ಈ ಸಲ ರಥೋತ್ಸವವನ್ನು ರದ್ದು ಗೋಳಿಸಲಾಗಿದ್ದು, ರಥೋತ್ಸವ ದಿನದಂದು ರಥದ ಸ್ಥಳದಲ್ಲೇ ಸಾಯಂಕಾಲ 4 ಘಂಟೆಗೆ ಪೂಜೆ ಮಾಡಲಾಗುವುದು. ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ ಧರಿಸಿಕೊಂಡು ಸಮಾಜಿಕ ಅಂತರವನ್ನು ಕಾಪಾಡಿಕೊಂಡು ಬರಬೇಕು‌. 10 ವರ್ಷದ ಒಳಗಿನ ಮಕ್ಕಳಿಗೆ ದೇವಸ್ಥಾನದ ಒಳಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಬಹುಮುಖ್ಯವಾಗಿ ಈ ಬಾರಿ ಜಾತ್ರೆಗೆ ದೇವಸ್ಥಾನದ ಅಕ್ಕ ಪಕ್ಕ ಆಟಿಗೆ ಸಾಮಾನು, ತಿಂಡಿ ತಿನಿಸುಗಳ ಅಂಗಡಿಗಳನ್ನು ಹಚ್ಚಲು ಅನುಮತಿ ಇರುವುದಿಲ್ಲ.

 

ಈ ಬಾರಿಯ ಸಿದ್ದೇಶ್ವರ ದೇವಸ್ಥಾನದ ಗರ್ಭ ಗುಡಿಗೆ ಯಾರಿಗೂ ಪ್ರವೇಶ ಇರುವುದಿಲ್ಲ ಮತ್ತು ಸಂಜೆ 6 ಘಂಟೆಗೆ ಮಂಗಳಾರತಿ ಮಾಡಿ ಜಾತ್ರೆಯನ್ನು ಮುಕ್ತಾಯ ಗೊಳಿಸಲಾಗುವುದು. ದೇವರ ದರ್ಶನ ಪಡೆಯುವ ವೇಳೆ ಜನದಟ್ಟನೆ ಆಗಬಾರದು ಎಂದು ಉದ್ದೇಶಿಸಿ ದೇವರ ದರ್ಶನವನ್ನು ಮುಂಜಾನೆ 8:30 ರಿಂದ ಪ್ರಾರಂಭಿಸಿ ಸಾಯಂಕಾಲ 5:00 ಘಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಿದ್ದೇಶ್ವರ ಜಾತ್ರಾ ಕಮಿಟಿಯವರು ತಿಳಿಸಿದ್ದಾರೆ.

 

 

 


Spread the love

About Laxminews 24x7

Check Also

ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ತಲಾಶ್ ನಡೆಸಿದ ಪೊಲೀಸರು (

Spread the loveಬೆಳಗಾವಿ: ಚಾಕು, ಮಚ್ಚು, ಲಾಂಗು ಎಂದರೆ ಆಟಿಕೆ ಸಾಮಾನು ಆದಂತಾಗಿವೆ. ಪುಸ್ತಕ, ಪೆನ್, ಊಟದ ಡಬ್ಬಿ ಇಟ್ಟುಕೊಳ್ಳುವ ಬ್ಯಾಗ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ