Breaking News

ವೈದ್ಯನ ನಿರ್ಲಕ್ಷ್ಯದಿಂದ ಯುವಕ ಸಾವು ಆರೋಪ; ಕ್ಲಿನಿಕ್ ಎದುರು ಶವ ಇಟ್ಟು ಯುವಕನ ಕುಟುಂಬಸ್ಥರ ಧರಣಿ

Spread the love

ಮಂಡ್ಯ: ವೈದ್ಯರೊಬ್ಬರ ನಿರ್ಲಕ್ಷ್ಯದಿಂದ ಯುವಕ ಸಾವಿಗೀಡಾಗಿದ್ದಾನೆ ಎಂದು ಆರೋಪಿಸಿ, ಕ್ಲಿನಿಕ್ ಎದುರು ಶವ ಇಟ್ಟು ಯುವಕನ ಕುಟುಂಬಸ್ಥರು ಧರಣಿ ನಡೆಸಿದ್ದಾರೆ. ಮಂಡ್ಯದ ವಿವಿ ಫಾರಂ ಬಳಿಯ ಕ್ಲಿನಿಕ್ ಎದುರು ಈ ಪ್ರತಿಭಟನೆ ನಡೆದಿದೆ. ಚಂದಗಾಲು ಗ್ರಾಮದ ನಿಶಾಂತ್(17) ಮೃತ ದುರ್ದೈವಿ.

2 ದಿನದ ಹಿಂದೆ ಜ್ವರ ಹಿನ್ನೆಲೆ ನಿಶಾಂತ್ ಕ್ಲಿನಿಕ್‌ಗೆ ಬಂದಿದ್ದ. ಈ ವೇಳೆ ಕ್ಲಿನಿಕ್‌ನ ವೈದ್ಯರೊಬ್ಬರು ನಿಶಾಂತ್‌ಗೆ ಇಂಜೆಕ್ಷನ್ ನೀಡಿದ್ದರು. ಆದರೆ ನಿಶಾಂತ್‌ಗೆ ಜ್ವರ ಕಡಿಮೆಯಾಗುವ ಬದಲು ಹೆಚ್ಚಾದ ಹಿನ್ನೆಲೆ ಆತನನ್ನು ತಕ್ಷಣ ಮಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದಾದ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಜೆಎಸ್‌ಎಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೂ ಚಿಕಿತ್ಸೆ ಫಲಿಸದೆ ನಿಶಾಂತ್ ಅಲ್ಲಿ ಮೃತಪಟ್ಟಿದ್ದಾನೆ.

ತದನಂತರ ನಿಶಾಂತ್ ಸಾವಿಗೆ ಖಾಸಗಿ ಕ್ಲಿನಿಕ್ ವೈದ್ಯನ ನಿರ್ಲಕ್ಷ್ಯ ಕಾರಣ ಎಂಬ ಆರೋಪ ಕೇಳಿಬಂದಿದೆ. ಪೋಷಕರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಬಳಿಕ, ಪೊಲೀಸರು ಧರಣಿನಿರತ ಪೋಷಕರ ಮನವೊಲಿಸಿ ಕಳಿಸಿದ್ದಾರೆ. ಮಂಡ್ಯದ ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

Spread the love ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಗ್ರಾಮೀಣ ಕ್ಷೇತ್ರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ