Breaking News
Home / ರಾಜಕೀಯ / ಬಿಜೆಪಿ ಸೇರುವಂತೆ ನನಗೂ ಕರೆ ಬಂದಿತ್ತು’: ಸ್ಫೋಟಕ ಹೇಳಿಕೆ ಕೊಟ್ಟ ಕೈ ಶಾಸಕ

ಬಿಜೆಪಿ ಸೇರುವಂತೆ ನನಗೂ ಕರೆ ಬಂದಿತ್ತು’: ಸ್ಫೋಟಕ ಹೇಳಿಕೆ ಕೊಟ್ಟ ಕೈ ಶಾಸಕ

Spread the love

ಬಳ್ಳಾರಿ: ನಾನೇನಾದ್ರೂ ಬಿಜೆಪಿಗೆ ಹೋಗಿದ್ರೇ ಈಗ ನಾನು ಮಂತ್ರಿಯಾಗ್ತಿದ್ದೇ, ಬಿಜೆಪಿ ಸರ್ಕಾರ ರಚನೆ ಸಂದ​ರ್ಭ​ದಲ್ಲಿ ನನಗೂ ಬಿಜೆಪಿ ಪಕ್ಷ​ದಿಂದ ಕರೆ ಬಂದಿತ್ತು. ಎಂದು ಹಗರಿಬೊಮ್ಮನಹಳ್ಳಿ ಕಾಂಗ್ರೆಸ್​ಶಾಸಕ ಎಸ್‌. ಭೀಮಾ​ನಾಯ್ಕ್ ಹೇಳಿ​ದ್ದಾ​ರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ನನಗೂ ಸಚಿವ ಸ್ಥಾನದ ಆಮಿಷ ಒಡ್ಡಿ ಪಕ್ಷ ಸೇರುವಂತೆ ಕರೆ ಬಂದಿತ್ತು, ಆದರೆ ನಾನು ಮಾಜಿ ಸಿಎಂ ಸಿದ್ದರಾಮಯ್ಯನವರ ಮುಖ ನೋಡ್ಕೊಂಡು ಬಿಜೆಪಿಗೆ ಹೋಗಲಿಲ್ಲ ಎಂದಿದ್ದಾರೆ.

2013- 2018ರ ವರೆಗೆ ಜೆಡಿಎಸ್ ಶಾಸಕನಾಗಿದ್ರು ಸಿದ್ದರಾಮಯ್ಯ ಕೇಳಿದಷ್ಟು ಅನುದಾನ ಕೊಟ್ಟಿದ್ರು, ನಮ್ಮನ್ನ ಕಾಂಗ್ರೆಸ್ ಗೆ ಕರೆದುಕೊಂಡು ಬಂದಿದ್ದೇ ಸಿದ್ದರಾಮಯ್ಯ. ಹೀಗಾಗಿ ಬೇರೆಯವರು ಹೋದ್ರು ನನಗೆ ಹೋಗೋ ಮನಸ್ಸಾಗಲಿಲ್ಲ. ಈ ಬಗ್ಗೆ ಕುಟುಂಬದ ಸದಸ್ಯರ ಜೊತೆಗೆ ಸಾಕಷ್ಟು ಚರ್ಚೆ ಮಾಡಿ, ಅವರ ನಾಯಕತ್ವವನ್ನು ಬಿಟ್ಟು ಹೋಗಬಾರದೆಂಬ ತೀರ್ಮಾನಕ್ಕೆ ಬಂದಿದ್ದೆ ಎಂದಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ