Breaking News

ಸಚಿವರ ಮೆರವಣಿಗೆ ವೇಳೆ ದುರಂತ; ಪೊಲೀಸ್​ ಸಿಬ್ಬಂದಿ ಕಾಲಿನ ಮೇಲೆ ಹರಿದ ಜೀಪ್​

Spread the love

ಬೆಂಗಳೂರು: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ಮೆರವಣಿಗೆ ನಡೆಸುವ ವೇಳೆಯಲ್ಲಿ ಅವಘಡವೊಂದು ಸಂಭವಿಸಿದ್ದು, ಪೊಲೀಸ್​ ಸಿಬ್ಬಂದಿಯ ಕಾಲಿನ ಮೇಲೆ ಜೀಪ್​ ಹರಿದಿದೆ.

 

 

ಇಂದು ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ದೆಹಲಿಯಿಂದ, ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಚಿವರು ಆಗಮಿಸಿದ ವೇಳೆ ಅವರನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿತ್ತು. ಸಾಕಷ್ಟು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿಕ್ಕಜಾಲ ಪೋಲಿಸ್ ಠಾಣೆಯ ಸಿಬ್ಬಂದಿ ಶಿವಕುಮಾರ್ ಕಾಲಿನ ಮೇಲೆ ಮೆರವಣಿಗೆ ನಡೆಸುತ್ತಿದ್ದ ಜೀಪ್​ನ ಚಕ್ರ ಹರಿದ ಪರಿಣಾಮ ಸಿಬ್ಬಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಇತರೆ ಪೊಲೀಸ್​ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.


Spread the love

About Laxminews 24x7

Check Also

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

Spread the loveಮೈಸೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ