Breaking News

ಸಚಿವರ ಮೆರವಣಿಗೆ ವೇಳೆ ದುರಂತ; ಪೊಲೀಸ್​ ಸಿಬ್ಬಂದಿ ಕಾಲಿನ ಮೇಲೆ ಹರಿದ ಜೀಪ್​

Spread the love

ಬೆಂಗಳೂರು: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ಮೆರವಣಿಗೆ ನಡೆಸುವ ವೇಳೆಯಲ್ಲಿ ಅವಘಡವೊಂದು ಸಂಭವಿಸಿದ್ದು, ಪೊಲೀಸ್​ ಸಿಬ್ಬಂದಿಯ ಕಾಲಿನ ಮೇಲೆ ಜೀಪ್​ ಹರಿದಿದೆ.

 

 

ಇಂದು ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ದೆಹಲಿಯಿಂದ, ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಚಿವರು ಆಗಮಿಸಿದ ವೇಳೆ ಅವರನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿತ್ತು. ಸಾಕಷ್ಟು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿಕ್ಕಜಾಲ ಪೋಲಿಸ್ ಠಾಣೆಯ ಸಿಬ್ಬಂದಿ ಶಿವಕುಮಾರ್ ಕಾಲಿನ ಮೇಲೆ ಮೆರವಣಿಗೆ ನಡೆಸುತ್ತಿದ್ದ ಜೀಪ್​ನ ಚಕ್ರ ಹರಿದ ಪರಿಣಾಮ ಸಿಬ್ಬಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಇತರೆ ಪೊಲೀಸ್​ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ