Breaking News

“ಲಕ್ಷ್ಮೀ ನ್ಯೂಸ್” ಸಮಾಜದ ಪ್ರತಿಬಿಂಬವಾಗಲಿ:ಶಾಸಕ ಸತೀಶ ಜಾರಕಿಹೊಳಿ

Spread the love

ಸಮಾಜದ ಸಮಸ್ಯೆ ಸರ್ಕಾರದ ಗಮನಕ್ಕೆ ತರುವಂತಾಗಲಿ/ತನ್ನದೆ ಆದ ಕಾರ್ಯಗಳ ಮೂಲಕ ಎಲ್ಲರ ವಿಶ್ವಾಸ ಗಳಿಸಲಿ/ಲಕ್ಷ್ಮೀ ನ್ಯೂಸ್ ಗೆ ಶುಭ ಹಾರೈಸಿದ ಶಾಸಕ ಸತೀಶ ಜಾರಕಿಹೊಳಿ.

ಜನೇವರಿ 1,2020 ರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ( ವೆಬ್ ಪೇಜ್ ) ಗೆ ಯಮಕನಮರ್ಡಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಶುಭ ಹಾರೈಸಿ ಜನರ ಸಮಸ್ಯೆಗಳ ಬಗ್ಗೆ ಸರ್ಕಾರದ ಕಣ್ತೆರೆಯುವ ಕೆಲಸ ಮಾಡಲಿ ಎಂದರು.

ಶನಿವಾರ ದಂದು ಲಕ್ಷ್ಮೀ ನ್ಯೂಸ್ ತಂಡದ ವತಿಯಿಂದ ಮಾಜಿ ಸಚಿವ ಹಾಗೂ ಯಮಕನಮರ್ಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ನಂತರ ಲಕ್ಷ್ಮೀ ನ್ಯೂಸ್ ನೊಂದಿಗೆ ಮಾತನಾಡಿದ ಶಾಸಕರು ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಪತ್ರಿಕೆಗಳು ಬಹಳಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ಹಿಸುತ್ತವೆ. ಸಮಾಜ ಸುಧಾರಣೆಯಲ್ಲಿ ಪತ್ರಿಕೆಗಳ ಪಾತ್ರ ಅಪಾರವಾಗಿದೆ. ಆದ್ದರಿಂದ ಸಮಾಜದಲ್ಲಿ ಬೇರು ಬಿಟ್ಟಿರುವ ಸಮಸ್ಯೆಗಳು,ನೊಂದವರ ಪರ ಸುದ್ದಿ ಬಿತ್ತರಿಸುವ ಮೂಲಕ ಸರ್ಕಾರದ ಕಣ್ತೆರೆಸುವ ಕೆಲಸ ಲಕ್ಷ್ಮೀ ನ್ಯೂಸ್ ಮಾಡಲಿ ಎಂದು ಹಾರೈಸಿದರು.


Spread the love

About Laxminews 24x7

Check Also

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ