Breaking News

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ ಸೌಲಭ್ಯ

Spread the love

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ಆರೋಗ್ಯ ಸಂಜೀವಿನಿ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ಯೋಜನೆ ಜಾರಿಗೆ ತರಲಾಗುತ್ತಿದೆ. ನಿಯಮಗಳನ್ನು ರೂಪಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ದೇಶಕರಿಗೆ ಸರ್ಕಾರ ಆದೇಶಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳು, ಅನುದಾನ ಪಡೆಯುವ ಆರೋಗ್ಯ ಸಂಸ್ಥೆ ಮತ್ತು ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳು, ಆಯುಷ್ ಇಲಾಖೆಗೆ ಒಳಪಡುವ ಎಲ್ಲಾ ಸರ್ಕಾರಿ ಸಂಸ್ಥೆಗಳು, ಅನುದಾನ ಪಡೆಯುವ ಆರೋಗ್ಯ ಸಂಸ್ಥೆಗಳು, ಖಾಸಗಿ ವಲಯದ ಆಸ್ಪತ್ರೆಗಳು, ವಿಶೇಷ ಆಸ್ಪತ್ರೆಗಳು, ವೈದ್ಯಕೀಯ ತಪಾಸಣೆ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ, ಚಿಕಿತ್ಸೆ ನೀಡಲಾಗುವುದು.

ಹೃದಯ ಸಂಬಂಧಿ ಕಾಯಿಲೆ, ನರಶಸ್ತ್ರಚಿಕಿತ್ಸೆ, ಯುರಾಲಜಿ, ಕ್ಯಾನ್ಸರ್, ಮಕ್ಕಳು ಮತ್ತು ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ ಯೋಜನೆಯಡಿ ಒಳಗೊಳ್ಳುತ್ತವೆ. ಯೋಜನೆಯ ಕಾರ್ಯಸ್ವರೂಪ, ಯೋಜನಾ ವೆಚ್ಚ, ಚಿಕಿತ್ಸಾ ವಿಧಾನ, ಚಿಕಿತ್ಸೆ ದರ, ಫಲಾನುಭವಿಗಳು ಮೊದಲಾದವುಗಳ ಬಗ್ಗೆ ವಿಸ್ತೃತ ಯೋಜನಾ ವರದಿ ಮತ್ತು ನಿಯಮ ರೂಪಿಸಲು ತಿಳಿಸಲಾಗಿದೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ