Breaking News

ಮಾಡದ ತಪ್ಪಿಗೆ ಸೌದಿ ಜೈಲಿನಲ್ಲಿದ್ದ ಕನ್ನಡಿಗ ಕೊನೆಗೂ ಬಂಧಮುಕ್ತ…!

Spread the love

ತಾನು ಮಾಡದ ತಪ್ಪಿಗೆ ಸೌದಿಯಲ್ಲಿ ಬಂಧನಕ್ಕೊಳಗಾಗಿದ್ದ ಕನ್ನಡಿಗ ಹರೀಶ್​ ಬಂಗೇರ 2 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ದೊರೆ ಮತ್ತು ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಹರೀಶ್​ ಬಂಗೇರರನ್ನು ಬಂಧಿಸಲಾಗಿತ್ತು.

ಹರೀಶ್​ ಬಂಗೇರ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆದಿದ್ದ ಮೂಡಬಿದಿರೆ ಮೂಲಕ ಮುಸ್ಲಿಂ ಸಹೋದರರು ಸೌದಿ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್​ ಮಾಡಿದ್ದರು. ಉಡುಪಿ ಸೆಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣ ಸಂಬಂಧ ಸೌದಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಕೇಂದ್ರ ಸಚಿವಾಲಯ 2 ವರ್ಷಗಳ ಬಳಿಕ ಸೌದಿ ಜೈಲಿನಿಂದ ಹರೀಶ್​ರನ್ನು ಬಂಧಮುಕ್ತಗೊಳಿಸುವಲ್ಲಿ ಯಶಸ್ವಿಯಾಗಿದೆ. ಸೌದಿ ಜೈಲಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹರೀಶ್​ ಬಂಗೇರರನ್ನು ಕುಟುಂಬಸ್ಥರು ಸ್ವಾಗತಿಸಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ