Breaking News

ಅಫ್ಘಾನಿಸ್ಥಾನದಲ್ಲಿ ಸಿಲುಕಿರುವ ಕನ್ನಡಿಗರ ಕರೆತರಲು ಎಡಿಜಿಪಿ ನೇಮಕ

Spread the love

ಬೆಂಗಳೂರು ; ತಾಲಿಬಾನ್ ಕಪಿಮುಷ್ಠಿಯಲ್ಲಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಹಿರಿಯ ಐಪಿಎಸ್ ಅಧಿಕಾರಿಯನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ‌. ಈಗಾಗಲೇ ಕೇಂದ್ರ ಸರ್ಕಾರದಿಂದ ಹೆಲ್ಪ್ ಲೈನ್ ಆರಂಭಿಸಲಾಗಿದೆ.ಇದರ ಬೆನ್ನಲ್ಲೇ ಅಫ್ಘನ್​ನಲ್ಲಿರುವ ಕನ್ನಡಿಗರನ್ನ ಕರೆತರುವ ಜವಾಬ್ದಾರಿ ಉಮೇಶ್ ಕುಮಾರ್ ಹೆಗಲಿಗೆ ಏರಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರನ್ನು ಈಗಾಗಲೇ ಸುರಕ್ಷಿತವಾಗಿ ಕರೆತರುವ ಕೆಲಸ‌ ಕೇಂದ್ರ ಸರ್ಕಾರ ಮಾಡುತ್ತಿದೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ