Breaking News
Home / ರಾಜಕೀಯ / ಅಫ್ಘಾನಿಸ್ಥಾನದಲ್ಲಿ ಸಿಲುಕಿರುವ ಕನ್ನಡಿಗರ ಕರೆತರಲು ಎಡಿಜಿಪಿ ನೇಮಕ

ಅಫ್ಘಾನಿಸ್ಥಾನದಲ್ಲಿ ಸಿಲುಕಿರುವ ಕನ್ನಡಿಗರ ಕರೆತರಲು ಎಡಿಜಿಪಿ ನೇಮಕ

Spread the love

ಬೆಂಗಳೂರು ; ತಾಲಿಬಾನ್ ಕಪಿಮುಷ್ಠಿಯಲ್ಲಿರುವ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಹಿರಿಯ ಐಪಿಎಸ್ ಅಧಿಕಾರಿಯನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಉಮೇಶ್ ಕುಮಾರ್ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ‌. ಈಗಾಗಲೇ ಕೇಂದ್ರ ಸರ್ಕಾರದಿಂದ ಹೆಲ್ಪ್ ಲೈನ್ ಆರಂಭಿಸಲಾಗಿದೆ.ಇದರ ಬೆನ್ನಲ್ಲೇ ಅಫ್ಘನ್​ನಲ್ಲಿರುವ ಕನ್ನಡಿಗರನ್ನ ಕರೆತರುವ ಜವಾಬ್ದಾರಿ ಉಮೇಶ್ ಕುಮಾರ್ ಹೆಗಲಿಗೆ ಏರಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರನ್ನು ಈಗಾಗಲೇ ಸುರಕ್ಷಿತವಾಗಿ ಕರೆತರುವ ಕೆಲಸ‌ ಕೇಂದ್ರ ಸರ್ಕಾರ ಮಾಡುತ್ತಿದೆ


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ