Breaking News
Home / ರಾಜಕೀಯ / 10 ದಿನ ಜಿಂದಾಲ್ ಪ್ರಕೃತಿ ಚಿಕಿತ್ಸೆಗೆ ಸಿದ್ದರಾಮಯ್ಯ

10 ದಿನ ಜಿಂದಾಲ್ ಪ್ರಕೃತಿ ಚಿಕಿತ್ಸೆಗೆ ಸಿದ್ದರಾಮಯ್ಯ

Spread the love

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಸ್ಟ್ 21ರಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಹತ್ತು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.

ಕಳೆದ ಒಂದು ವರ್ಷದಿಂದ ಹಲವು ಬಾರಿ ಜಿಂದಾಲ್ ಪ್ರಕೃತಿ ಚಿಕಿತ್ಸೆಗೆ ಹೋಗಲು ನಿರ್ಧರಿಸಿದ್ದರೂ ನಾನಾ ಕಾರಣಗಳಿಂದ ಹೋಗಲು ಸಾಧ್ಯವಾಗಿಲ್ಲ. ಕೊರೊನಾ ಸೋಂಕು, ಚುನಾವಣಾ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳಲ್ಲೇ ಬ್ಯುಸಿಯಾಗಿದ್ದ ಸಿದ್ದರಾಮಯ್ಯ ಈಗ ಪ್ರಕೃತಿ ಚಿಕಿತ್ಸೆ ಮೊರೆ ಹೋಗಲು ಮುಂದಾಗಿದ್ದಾರೆ.

ಪೋಸ್ಟ್ ಕೋವಿಡ್ ಸಮಸ್ಯೆಯಿಂದ ಬಳಲುತ್ತಿರುವ ಸಿದ್ದರಾಮಯ್ಯ ನವರಿಗೆ ಈ ಮೊದಲು ದೇಹದ ಶುಗರ್ ಲೆವಲ್ ಕಂಟ್ರೋಲ್ ನಲ್ಲಿತ್ತು. ಆದರೆ ಕೋವಿಡ್ ಚಿಕಿತ್ಸೆ ಬಳಿಕ ಶುಗರ್ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದೆ. ಅಲ್ಲದೇ ತೂಕ ಹೆಚ್ಚಳ ಸಮಸ್ಯೆಯಿಂದಲೂ ಚಿಂತಿತರಾಗಿದ್ದಾರೆ ಎನ್ನಲಾಗಿದೆ. ಪಕ್ಷದ ಕಾರ್ಯಕ್ರಮ, ಜಿಲ್ಲಾ ಪ್ರವಾಸಗಳ ನಡುವೆಯೇ ಈಗ ಬಿಡುವು ಮಾಡಿಕೊಂಡು ಪ್ರಕೃತಿ ಚಿಕಿತ್ಸೆಗೆ ತೆರಳಲಿದ್ದಾರೆ.


Spread the love

About Laxminews 24x7

Check Also

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನಕ್ಕೆ 2,000 ಪೊಲೀಸರ ಸರ್ಪಗಾವಲು: ಪ್ರವಾಸಿಗರಿಗೆ, ದೋಣಿಗಳಿಗೆ ನೋ ಎಂಟ್ರಿ!

Spread the love ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನಕ್ಕೆ 2,000 ಪೊಲೀಸರ ಸರ್ಪಗಾವಲು: ಪ್ರವಾಸಿಗರಿಗೆ, ದೋಣಿಗಳಿಗೆ ನೋ ಎಂಟ್ರಿ! ಲೋಕಸಭಾ ಚುನಾವಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ