Breaking News

ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ: ಸಚಿವ ನಿರಾಣಿ ಮೇಲೆ FIR ಸಾಧ್ಯತೆ

Spread the love

ಬೆಂಗಳೂರು: ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಎದುರಿಸುತ್ತಿರುವ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್. ಆರ್.ನಿರಾಣಿ ಮೇಲೆ ಇಂದು ಕೊಡಿಗೇಹಳ್ಳಿ ಠಾಣೆ ಪೊಲೀಸರು ಎಫ್​ಐಆರ್ ದಾಖಲಿಸುವ ಸಾಧ್ಯತೆಗಳಿವೆ.

ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿ, ಸೆಪ್ಟೆಂಬರ್ 13 ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಿತ್ತು.

ಆ ಪ್ರಕಾರ ಇಂದು ಸಂಜೆ ವೇಳೆಗೆ ಸಚಿವರ ಮೇಲೆ ಎಫ್​ಐಆರ್ ದಾಖಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಕಳೆದ ವರ್ಷ ವಾಟ್ಸ್ ಆಪ್ ಗ್ರೂಪ್ ನಲ್ಲಿ ನಿರಾಣಿ ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶವೊಂದನ್ನು ರವಾನಿಸಿದ್ದರು ಎಂದು, ಆರೋಪಿಸಿ ಗೋವಿಂದರಾಮ್ ಎಂಬುವರು ಖಾಸಗಿ ದೂರು ದಾಖಲಿಸಿ, ಐಪಿಸಿ ಸೆಕ್ಷನ್ 153A, 295, 295-A‌ಅಡಿ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ