Breaking News

ವರಮಹಾಲಕ್ಷ್ಮೀ ಹಬ್ಬಕ್ಕಿಲ್ಲ ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನ

Spread the love

ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ವರಮಹಾಲಕ್ಷ್ಮಿ ದರ್ಶನ ಪಡೆಯಬೇಕು ಎಂದುಕೊಂಡಿದ್ದ ಭಕ್ತರಿಗೆ ಜಿಲ್ಲಾಡಳಿತ ನಿರಾಸೆ ಮೂಡಿಸಿದ್ದು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಕ್ತರಿಗೆ ಅವಕಾಶ ನೀಡದೆ ದೇವಾಲಯ ಬಂದ್ ಮಾಡಿದೆ.

ಇಂದಿನಿಂದ ನಾಲ್ಕು ದಿನಗಳ ಕಾಲ ದೇವಾಲಯ ಪ್ರವೇಶಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದ್ದು, ಜಿಲ್ಲಾಡಳಿತ ಸೂಚನೆ ಹಿನ್ನೆಲೆಯಲ್ಲಿ ದೇವಾಲಯ ಬಂದ್ ಮಾಡಿ ಆಡಳಿತ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯದ ಅರ್ಚಕರಿಂದ ಬೆಳಗ್ಗೆ ಸಾಂಪ್ರದಾಯಿಕ ಪೂಜೆ ನಡೆಯಲಿದ್ದು, ಭಕ್ತರಿಗೆ, ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಗೊರವನಹಳ್ಳಿ ಮಹಾಲಕ್ಷ್ಮೀ ದರ್ಶನ ನಿಷೇಧ ಮಾಡಿದ್ದಾರೆ. ಪ್ರತಿವರ್ಷ ಹಬ್ಬದಂದು ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ರು. ಈ ಬಾರಿಯೂ ಹಲವರು ವರಮಹಾಲಕ್ಷ್ಮೀ ಹಬ್ಬವಾದ ಪ್ರಯುಕ್ತ ದೇವಿಯ ದರ್ಶನಕ್ಕಾಗಿ ಕಾದ ಭಕ್ತರಿಗೆ ನಿರಾಸೆ ಎದುರಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ