Breaking News

ಹಬ್ಬದ ಪ್ರಯುಕ್ತ ನಂದಿನಿ ಉತ್ಪನ್ನಗಳ ಮೇಲೆ ಶೇಕಡಾ 10 ರಿಯಾಯ್ತಿ

Spread the love

ಬೆಂಗಳೂರು, – ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತನ್ನ ಗ್ರಾಹಕರಿಗೆ ಕೆಎಂಎಫ್ ಸಿಹಿ ಸುದ್ದಿ ನೀಡಿದ್ದು, ಸಿಹಿ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯ್ತಿ ನೀಡಿದೆ. ಆ.19ರಿಂದ 15 ದಿನ ಗಳ ಕಾಲ ರಾಜ್ಯಾದ್ಯಾಂತ ನಂದಿನಿ ಉತ್ಸವಕ್ಕೆ ಚಾಲನೆ ನೀಡಿರುವ ಕೆಎಂಎಫ್ ಸಿಹಿ ಉತ್ಪನ್ನಗಳ ಮೇಲೆ ರಿಯಾಯ್ತಿ ನೀಡಿದೆ. ಅಲ್ಲದೆ ಮಧುಮೇಹಿಗಳು ಮತ್ತು ಆಹಾರ ಕಾಳಜಿ ಇರುವರ ಅನುಕೂಲಕ್ಕಾಗಿ ಹೊಸದಾಗಿ ಸಿಹಿ ತಿನಿಸುಗಳನ್ನು ಬಿಡುಗಡೆ ಮಾಡಿದೆ ಎಂದು ಎಂದು ಕೆ ಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ತಿಳಿಸಿದ್ದಾರೆ.

ನಂದಿನಿ ನೈಸರ್ಗಿಕ ಹಾಗೂ ಆರ್ಯುವೇದ ಗುಣವುಳ್ಳ ಐಸ್‍ಕ್ರೀಮ್‍ಗಳು ಕೂಡ ಲಭ್ಯವಿದ್ದು, ಒಂದು ಕೊಂಡರೆ ಮತ್ತೊಂದು ಉಚಿತವಾಗಿ ದೊರೆಯಲಿದೆ. ಮೈಸೂರ್ ಪಾಕ್, ಪೇಡ, ಧಾರವಾಡ ಪೇಡ, ಕೇಸರ್ ಪೇಡ, ಏಲಕ್ಕಿ ಪೇಡ, ಬಾದಾಮ್, ಕ್ಯಾಶು, ಡ್ರೈಫ್ರೂಟ್, ಕೋಕೊನಟ್, ಚಾಕೋಲೇಟ್, ಬರ್ಫಿ, ಕುಂದ, ಜಾಮೂನ್, ರಸಗುಲ್ಲ, ಸಿರಿಧಾನದ ಲಾಡು, ಸಿರಿಧಾನ್ಯ ಹಾಲಿನ ಪುಡಿ, ಚಕ್ಕೆ ಲಾಡು, ಸಿರಿಧಾನ್ಯ ಪಾಸಯ, ಸಿರಿಧಾನ್ಯ ಸಿಹಿ ಪೊಂಗಲ್, ಎಲ್ಲ ಸಿಹಿ ಉತ್ಪನ್ನಗಳು, ಕುಕ್ಕೀಸ್‍ಗಳ ಸಿಹಿ ಪೊಂಗಲ್, ಎಲ್ಲ ಸಿಹಿ ಉತ್ಪನ್ನಗಳು, ಕುಕಕೀಸ್‍ಗಳ ಮಾರಾಟ ದರದ ಮೇಲೆ ರಿಯಾಯಿತಿ ಸಿಗಲಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ