Breaking News

ಲಂಚ ಸ್ವೀಕರಿಸಿದ ಪ್ರಕರಣವೊಂದರಲ್ಲಿ ಶಾಲಾ ವಾರ್ಡನ್‌ಗೆ ಜೈಲು ಶಿಕ್ಷೆ

Spread the love

ಮೈಸೂರು: ಲಂಚ ಸ್ವೀಕರಿಸಿದ ಪ್ರಕರಣವೊಂದರಲ್ಲಿ ಶಾಲಾ ವಾರ್ಡನ್‌ಗೆ ಜೈಲು ಶಿಕ್ಷೆಯಾಗಿದೆ. ಗಣಪತಿ ಜಕಾತಿ ಎಂಬ ಶಾಲಾ ವಾರ್ಡನ್‌ಗೆ 3 ವರ್ಷ ಸಾದಾ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ 3ನೇ ಹೆಚ್ಚುವರಿ ಸತ್ರ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆರಾಲ್ಡ್ ಆರ್ ಮೆಂಡೋನ್ಸ್ ತೀರ್ಪು ನೀಡಿದ್ದಾರೆ.

ಸರ್ಕಾರಿ ವಿಶೇಷ ಅಭಿಯೋಜಕಿ ಕಲಿಯಂಡ ಮುತ್ತಮ್ಮ ಪೂಣಚ್ಚ ಅವರು ಗೋಳೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಾರ್ಡನ್ ವಿರುದ್ಧ ವಾದ ಮಂಡಿಸಿದ್ದರು .

ಏನಿದು ಪ್ರಕರಣ:

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗೋಳೂರಿನಲ್ಲಿ ಪ್ರಕರಣದ ನಡೆದಿತ್ತು. ಹಾಸ್ಟೆಲ್​ಗೆ ಎಲೆಕ್ಟ್ರಾನಿಕ್ ಉಪಕರಣ ರಿಪೇರಿ ಶುಲ್ಕ ನೀಡಲು ವಾರ್ಡನ್‌ ಗಣಪತಿ ಜಕಾತಿ ಲಂಚ ಕೇಳಿದ್ದರು. ಆ ಸಂಬಂಧ 2 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದರು. ಅಂದಿನ ಎಸಿಬಿ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಇನ್ಸ್​​ಪೆಕ್ಟರ್ ಅನಿಲ್‌ ಕುಮಾರ್ ಅವರು ವಾರ್ಡನ್‌ ಗಣಪತಿ ಜಕಾತಿ ವಿರುದ್ಧ ಪ್ರಕರಣದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ