Breaking News

ಅತ್ಯಾಚಾರದ ಆರೋಪಿಗಳು ಹೊರರಾಜ್ಯದವರೆಂಬ ಶಂಕೆ; ತ.ನಾಡು, ಕೇರಳದತ್ತ ಹೊರಟ ಪೊಲೀಸ್?

Spread the love

ಮೈಸೂರು: ಮೈಸೂರು ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಆರೋಪಿಗಳ ಸುಳಿವು ಪತ್ತೆಯಾಗಿದೆ ಎನ್ನಲಾಗಿದೆ.

ಘಟನೆ ನಡೆದ ಸ್ಥಳದಲ್ಲಿ ದೊರೆತ ಬಿಯರ್ ಬಾಟಲ್​ಗಳು ಮೈಸೂರಿನಲ್ಲಿ ಖರೀದಿಯಾಗಿಲ್ಲ.. ಇನ್ನು ಆರೋಪಿಗಳು ತಮಿಳು ಮಲಯಾಳಂ ಮಾತನಾಡುತ್ತಿದ್ರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾಲೇಜು ವಿದ್ಯಾರ್ಥಿಗಳ ಬೆನ್ನು ಹತ್ತಿದ್ದು ಅತ್ಯಾಚಾರ ಮಾಡಿದವರು ಎಂಜಿನಿಯರ್ ವಿದ್ಯಾರ್ಥಿಗಳಾ ಎಂಬ ಶಂಕೆ ಪೊಲೀಸರಿಗೆ ವ್ಯಕ್ತವಾಗಿದೆ ಎನ್ನಲಾಗಿದೆ.

ಮೈಸೂರಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ತಮಿಳುನಾಡು ಮೂಲದ ಓರ್ವ ಹಾಗೂ ಕೇರಳ ಮೂಲದ ಮೂವರ ಮೇಲೆ ವಿದ್ಯಾರ್ಥಿಗಳ ಮೇಲೆ ಪೊಲೀಸರಿಗೆ ಅನುಮಾನ ಮೂಡಿದ್ದು ಘಟನೆ ನಡೆದ ಮಾರನೇ ದಿನವೂ ಆರೋಪಿಗಳು ಮೈಸೂರಿನಲ್ಲೇ ಇದ್ದರು ಎನ್ನಲಾಗಿದೆ. ರೇಪ್ ಸುದ್ದಿ ಹಬ್ಬುತ್ತಿದ್ದಂತೆ ಮೈಸೂರಿನಿಂದ ಎಸ್ಕೇಪ್ ಆಗಿರೋ ಸ್ಟುಡೆಂಟ್ಸ್​.. ತಮಿಳುನಾಡು, ಕೇರಳದಲ್ಲಿ ಅಡಗಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.

ಮೈಸೂರಿನಿಂದ ಕೇರಳಕ್ಕೆ ತೆರಳಿರುವ ಪೊಲೀಸರ 2 ತಂಡಗಳು ಗ್ಯಾಂಗ್​ರೇಪ್ ಆರೋಪಿಗಳ ಬೆನ್ನುಬಿದ್ದಿದ್ದಾರೆ ಎನ್ನಲಾಗಿದೆ. ಅಲ್ಲದೇ ಖಚಿತ ಮಾಹಿತಿ ಆಧರಿಸಿ ಕೇರಳದತ್ತ ಹೊರಟ ಮತ್ತೊಂದು ಪೊಲೀಸ್ ಟೀಂ ಹೊರಟಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಬ್ಲೇಡ್​ನಿಂದ ಮಹಿಳೆ ಕುತ್ತಿಗೆ ಮೇಲೆ ದಾಳಿ ಮಾಡಿ ಚಿನ್ನಾಭರಣ, ನಗದು ಕದ್ದು ಪರಾರಿ

Spread the loveಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದ ಮಹಿಳೆಯ ಕುತ್ತಿಗೆಗೆ ದುಷ್ಕರ್ಮಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ