Breaking News

ಮೈಸೂರು ಗ್ಯಾಂಗ್ ರೇಪ್ ಪ್ರಕರಣ : ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಆರೋಪಿಗಳು

Spread the love

ಮೈಸೂರು : ರಾಜ್ಯದ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದ್ದಂತ ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂತಹ ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಂತ ಸಂದರ್ಭದಲ್ಲಿ, ತಾವೇ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಎಂಬುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

 

ಇಂದು ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳನ್ನು ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಹಣಕ್ಕೆ ಬೇಡಿಕೆ ಇಟ್ಟಿದ್ದು ತಾವು ಎಂಬುದಾಗಿ ತಪ್ಪೊಪ್ಪಿಕೊಂಡಿರೋದಾಗಿ ತಿಳಿದು ಬಂದಿದೆ.

ಅಂದಹಾಗೇ ಆಗಸ್ಟ್ 24ರಂದು ಚಾಮುಂಡೇಶ್ವರಿ ಬೆಟ್ಟದ ತಪ್ಪಲು ಪ್ರದೇಶದ ಲಲಿತಾದ್ರಿಪುರ ತಪ್ಪಲಿನಲ್ಲಿ ಸ್ನೇಹಿತನೊಂದಿಗೆ ತೆರಳಿದ್ದಂತ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚರ ನಡೆದಿತ್ತು. ಈ ಸಂಬಂಧ ಸಂತ್ರಸ್ತೆಯ ಸ್ನೇಹಿತ ಪೊಲೀಸರಿಗೆ ದೂರು ನೀಡಿದ್ದನು. ಈ ಬಳಿಕ ತಮಿಳುನಾಡಿನ ತಿರುಪುರ್ ನಲ್ಲಿ 6 ಆರೋಪಿಗಳ ಪೈಕಿ, ಐವರನ್ನು ಪೊಲೀಸರು ಬಂಧಿಸಿದ್ದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ