Breaking News

ಲಾರಿಯಲ್ಲಿ ತುಂಬಿದ್ದ ಸಸಿಗಳ ಅಡಿಯಲ್ಲಿತ್ತು 3,400 ಕೆ.ಜಿ. ಗಾಂಜಾ!

Spread the love

ಬೆಂಗಳೂರು: ನರ್ಸರಿಯಿಂದ ತಂದಿದ್ದ ಸಸಿಗಳ ಜೊತೆಯಲ್ಲೇ ಬೃಹತ್‌ ಪ್ರಮಾಣದ ಗಾಂಜಾ ಸಾಗಣೆ ಮಾಡುತ್ತಿದ್ದ ಮೂವರನ್ನು ಎನ್‌ಸಿಬಿ ಬೆಂಗಳೂರು ವಲಯದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಲಾರಿಯಲ್ಲಿದ್ದ 3,400 ಕೆ.ಜಿ. ಗಾಂಜಾ ಜಪ್ತಿ ಮಾಡಿದ್ದಾರೆ.

ಡಿ.ಶಿಂಧೆ, ಎಂ.ಆರ್‌.ಕಾಂಬ್ಳೆ ಹಾಗೂ ಎನ್‌.ಜೋಗದಾಂದ್‌ ಬಂಧಿತರು. ಇವರೆಲ್ಲಾ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯವರು.

ಲಾರಿಯ ಮೂಲಕ ಗಾಂಜಾ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಬೆನ್ನಲ್ಲೇ ಜಂಟಿ ಕಾರ್ಯಾಚರಣೆ ನಡೆಸಿದ ಬೆಂಗಳೂರು ಹಾಗೂ ಹೈದರಾಬಾದ್‌ ಅಧಿಕಾರಿಗಳ ತಂಡ ಹೈದರಾಬಾದ್‌ ಹೊರವರ್ತುಲ ರಸ್ತೆಯ ಟೋಲ್‌ ಸಂಗ್ರಹ ಕೇಂದ್ರದ ಬಳಿ ಲಾರಿಯನ್ನು ತಡೆದು ಪರಿಶೀಲಿಸಿತ್ತು. ಆಗ ಕೋಟ್ಯಂತರ ಮೌಲ್ಯದ ಗಾಂಜಾ ಪತ್ತೆಯಾಗಿದೆ.

‘ಆರೋಪಿಗಳು ಗಾಂಜಾ ತುಂಬಿದ್ದ 141 ಪ್ಲಾಸ್ಟಿಕ್‌ ಚೀಲಗಳನ್ನು ಗಿಡಗಳ ಅಡಿಯಲ್ಲಿ ಅಡಗಿಸಿಟ್ಟಿದ್ದರು. ಗಿಡದ ಬುಡದಲ್ಲಿನ ಮಣ್ಣಿನಲ್ಲೂ ಗಾಂಜಾ ಪೊಟ್ಟಣಗಳು ಇದ್ದವು. ಇವುಗಳನ್ನು ಮುಂಬೈ, ಪುಣೆ, ಥಾಣೆ ನಗರಗಳು ಹಾಗೂ ಹೊರ ರಾಜ್ಯಗಳಿಗೆ ಪೂರೈಕೆ ಮಾಡಲು ಮುಂದಾಗಿದ್ದರು. ಆರೋಪಿಗಳ ಜೊತೆ ಮಹಾರಾಷ್ಟ್ರ ನೋಂದಣಿ ಹೊಂದಿದ್ದ ಲಾರಿಯನ್ನೂ ವಶಕ್ಕೆ ಪಡೆಯಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಇವರು ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಟ್ಟುಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದರು. ಪಾರ್ಟಿಗಳಿಗೂ ಗಾಂಜಾ ಪೂರೈಕೆ ಮಾಡುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಅವರಿಂದ ಇನ್ನಷ್ಟು ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ’ ಎಂದು ಹೇಳಿದ್ದಾರೆ.

‘ಕಳೆದ ವರ್ಷ ಒಟ್ಟು 1,971 ಕೆ.ಜಿ.ಗಾಂಜಾ ಜಪ್ತಿ ಮಾಡಿ, ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಈ ವರ್ಷದಲ್ಲಿ ಈವರೆಗೆ 7,500 ಕೆ.ಜಿ.ಗಾಂಜಾ ಜಪ್ತಿ ಮಾಡಿ 25 ಮಂದಿಯನ್ನು ಬಂಧಿಸಲಾಗಿದೆ’ ಎಂದೂ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ