Breaking News

ಸುಪ್ರೀಂಕೋರ್ಟ್‌ನ 9 ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧನೆ

Spread the love

ನವದೆಹಲಿ: ಸುಪ್ರೀಂಕೋರ್ಟ್‌ಗೆ ನೇಮಕಗೊಂಡಿರುವ ಕರ್ನಾಟಕದ ಬಿ.ವಿ.ನಾಗರತ್ನ ಸೇರಿದಂತೆ 9 ನೂತನ ನ್ಯಾಯಮೂರ್ತಿಗಳಿಗೆ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಮಂಗಳವಾರ ಪ್ರತಿಜ್ಞಾವಿಧಿ ಬೋಧಿಸಿದರು.

ಇದರೊಂದಿಗೆ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 33ಕ್ಕೆ ಏರಿದಂತಾಗಿದೆ. ಸುಪ್ರೀಂಕೋರ್ಟ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 9 ನ್ಯಾಯಮೂರ್ತಿಗಳು ಏಕಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.

ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಓಕಾ, ವಿಕ್ರಮ್‌ ನಾಥ್‌, ಜಿತೇಂದ್ರಕುಮಾರ್‌ ಮಾಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ, ಸಿ.ಟಿ.ರವಿಕುಮಾರ್, ಎಂ.ಎಮ.ಸುಂದ್ರೇಶ್‌, ಬೇಲಾ ಎಂ.ತ್ರಿವೇದಿ ಹಾಗೂ ಪಿ.ಎಸ್‌.ನರಸಿಂಹ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ