Breaking News
Home / Uncategorized / ಮಹಾಮಾರಿ ಕೋವಿಡ್‌ಗೆ ಕುಖ್ಯಾತ ರೌಡಿಶೀಟರ್‌ ಬಾಂಬೆ ರವಿ ಬಲಿ

ಮಹಾಮಾರಿ ಕೋವಿಡ್‌ಗೆ ಕುಖ್ಯಾತ ರೌಡಿಶೀಟರ್‌ ಬಾಂಬೆ ರವಿ ಬಲಿ

Spread the love

ಬೆಂಗಳೂರು: ಕೊಲೆ, ಕೊಲೆ ಯತ್ನ ಹಾಗೂ ದರೋಡೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಹಲವು ವರ್ಷಗಳಿಂದ ಭೂಗತನಾಗಿದ್ದ ಕುಖ್ಯಾತ ರೌಡಿಶೀಟರ್ ಬಾಂಬೆ ರವಿ ಕೊರೊನಾಗೆ ಬಲಿಯಾಗಿದ್ದಾನೆ‌.

ಹಲವು ವರ್ಷಗಳಿಂದ ದಕ್ಷಿಣ ಆಫ್ರಿಕಾದಲ್ಲಿ ತಲೆಮರೆಸಿಕೊಂಡಿದ್ದ ಬಾಂಬೆ ರವಿಗೆ ಕೋವಿಡ್‌ ಸೋಂಕು ತಗುಲಿ ಸ್ಥಳೀಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ‌. ಮೃತ ರೌಡಿಶೀಟರ್‌ ಹಲವು ವರ್ಷಗಳಿಂದ ಬೆಂಗಳೂರು ಪೊಲೀಸರಿಗೆ ತಲೆನೋವಾಗಿದ್ದ. ಭೂಗತನಾಗಿದ್ದುಕೊಂಡೇ ನಗರದಲ್ಲಿ ರೌಡಿ ಚಟುವಟಿಕೆಯಲ್ಲಿ ಪರೋಕ್ಷವಾಗಿ ಭಾಗಿಯಾಗಿದ್ದ.

ಕಳೆದ ವರ್ಷ ನಿರ್ಮಾಪಕ ಉಮಾಪತಿ ಹಾಗೂ ಸಹೋದರ ದೀಪಕ್‌ಗೆ ಕರೆ ಮಾಡಿ ರವಿ ಧಮ್ಕಿ ಹಾಕಿದ್ದ‌. ಅಲ್ಲದೆ ಸುಪಾರಿ ನೀಡಿ ತಮ್ಮ ಸಹಚರರ ಮೂಲಕ ಕೊಲೆಗೂ ಸಂಚು ರೂಪಿಸಿದ್ದ.‌ ಈ ಸಂಬಂಧ ಮಾಹಿತಿ ಆಧರಿಸಿ ಸುಪಾರಿ ಹುಡುಗರನ್ನು ರೆಡ್ ಹ್ಯಾಂಡ್ ಆಗಿ ಜಯನಗರ ಪೊಲೀಸರು ಬಂಧಿಸಿದ್ದರು.

 


Spread the love

About Laxminews 24x7

Check Also

ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Spread the loveಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ