Breaking News

ಅರಣ್‌ಸಿಂಗ್ ರಾಜ್ಯಕ್ಕೆ ಬರೋದೇ ದುಡ್ಡು ವಸೂಲಿ ಮಾಡೋದಕ್ಕೆ : ಹೆಚ್.ಡಿ.ಕೆ ವಾಗ್ದಾಳಿ

Spread the love

ಮೈಸೂರು : ರಾಜ್ಯ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ರಾಜ್ಯಕ್ಕೆ ಬರುವುದು ಕೇವಲ ದುಡ್ಡು ವಸೂಲಿ ಮಾಡುವುದಕ್ಕಾಗಿ ಅದು ಬಿಟ್ಟರೆ ಅವರಿಗೆ ಬೇರೇನೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅರುಣ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಹೇಳಿಕೆ ನೀಡಿದ ಅರುಣ್ ಸಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಕರ್ನಾಟಕ ಹಾಗೂ ಇಲ್ಲಿನ ಸ್ಥಳೀಯ ಪಕ್ಷದ ಬಗ್ಗೆ ಆತನಿಗೆ ಮಾಹಿತಿ ಇಲ್ಲ, ಪಾಪ ಅವನಿಗೆ ಏನ್ ಗೊತ್ತು.!? ಆತ ಬಂದಿರೋದು ದುಡ್ ವಸೂಲಿ ಮಾಡೋದಿಕ್ಕೆ.! ಕಲೆಕ್ಷನ್ ಮಾಡೊದಕ್ಕೆ ಬಂದಿರೋ ವ್ಯಕ್ತಿ ಜೆಡಿಎಸ್ ಬಗ್ಗೆ ಮಾತನಾಡಿದ್ದಾನೆ ಎಂದು ಕಿಡಿಕಾರಿದರು .

ಬಳಿಕ ಮಾತನಾಡಿದ ಅವರು ಮೈಸೂರು ಮೇಯರ್ ಆಯ್ಕೆ ಚುನಾವಣೆಯಲ್ಲಿ ಬೆಂಬಲ ಕೋರಿ ಶಾಸಕ ಸಾ.ರಾ. ಮಹೇಶ್ ಕಚೇರಿಗೆ ಬಿಜೆಪಿ ನಾಯಕರು ಏಕೆ‌ ಬಂದಿದ್ರು? ನಾವೇನು ಬೆಂಬಲ ಕೋರಿ ಅವರ ಬಳಿಗೆ ಹೋಗಿಲ್ಲ. ಅರುಣ್ ಸಿಂಗ್ ಗೆ ರಾಜ್ಯದ ವಾಸ್ತವ ಪರಿಸ್ಥಿತಿ ಗೊತ್ತಿಲ್ಲ, ಇಲ್ಲಿ ಬಿಜೆಪಿ ಸರ್ಕಾರ ಇರೋದ್ರಿಂದ ವಸೂಲಿಗಾಗಿ ಆಗಾಗ್ಗೆ ಭೇಟಿ ನೀಡುತ್ತಾರೆ ಅದು ಬಿಟ್ಟು ಬೇರೇನೂ ಗೊತ್ತಿಲ್ಲ. ಜೆಡಿಎಸ್ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದು ಎಂದು ಹೇಳಿದರು.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ