Breaking News
Home / ರಾಜಕೀಯ / ಪಿಡಿಒನನ್ನು ಹೊರದಬ್ಬಿ ಪಂಚಾಯಿತಿ ಕಚೇರಿಗೆ ಬೀಗ ಜಡಿದ ಗ್ರಾಪಂ ಸದಸ್ಯರು!

ಪಿಡಿಒನನ್ನು ಹೊರದಬ್ಬಿ ಪಂಚಾಯಿತಿ ಕಚೇರಿಗೆ ಬೀಗ ಜಡಿದ ಗ್ರಾಪಂ ಸದಸ್ಯರು!

Spread the love

ಚಿಕ್ಕಬಳ್ಳಾಪುರ: ಪಿಡಿಒ ಅವರನ್ನು ಹೊರಗೆ ಹಾಕಿ ಗ್ರಾಮ ಪಂಚಾಯಿತಿ ಕಚೇರಿಗೆ ಸದಸ್ಯರು ಬೀಗ ಜಡಿದ ಘಟನೆ ಗುಡಿಬಂಡೆ ತಾಲೂಕು ವರ್ಲಕೊಂಡ ಗ್ರಾಮದಲ್ಲಿ ಸಂಭವಿಸಿದೆ.
ಪಂಚಾಯಿತಿ ಕಾರ್ಯಾಲಯಕ್ಕೆ ಪಿಡಿಒ ಶ್ರೀನಿವಾಸ್​ ಸರಿಯಾಗಿ‌ ಬರುತ್ತಿಲ್ಲ, ಅಭಿವೃದ್ಧಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಗ್ರಾಪಂ ಸದಸ್ಯರು ಅಧ್ಯಕ್ಷೆ ಆನಂದಮ್ಮ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪಿಡಿಒ ಶ್ರೀನಿವಾಸ್ ಅವರನ್ನ ವರ್ಗಾವಣೆ ಮಾಡುವಂತೆ ಜಿಪಂ ಸಿಇಒ ಸೇರಿದಂತೆ ಮೇಲಧಿಕಾರಿಗಳಿಗೆ ಜನಪತ್ರಿನಿಧಿಗಳು ದೂರು‌ ನೀಡಿದ್ದರು. ಆದರೂ ಗ್ರಾಮಗಳ ಅಭಿವೃದ್ಧಿಗೆ ಪಿಡಿಒ ಸಹಕರಿಸದೆ, ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ.

 

ಇಂದು‌ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕರೊನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, ಈ ನಡುವೆ ಪಿಡಿಒ- ಜನಪ್ರತಿನಿಧಿಗಳ ನಡುವೆ ವೈಮನಸ್ಸು ಉಂಟಾಗಿ ಪಂಚಾಯಿತಿ ವ್ಯಾಪ್ತಿಯ ಜನ ಹೈರಾಣಾಗಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ