Breaking News

ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಮದುವೆಯಾಗುವುದಾಗಿ ವಂಚನೆ ;30ರ ಮೇಲ್ಪಟ್ಟ ಯುವತಿಯರೇ ಟಾರ್ಗೆಟ್

Spread the love

ಬೆಂಗಳೂರು(ಸೆ. 01) ಮ್ಯಾಟ್ರಿಮೋನಿ ಸೈಟ್ ಮೂಲಕ ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.

ಹೆಣ್ಣು ಮಕ್ಕಳಿಂದ ಹಣ ಒಡವೆ ಪಡೆದು ಮದುವೆಯಾಗದೇ ನಂಬರ್ ಬ್ಲಾಕ್ ಮಾಡ್ತಿದ್ದ. ರಮೇಶ್, ವಿಜಯ್ ಹೀಗೆ ಬೇರೆ ಬೇರೆ ಹೆಸರಲ್ಲಿ ನಕಲಿ ಖಾತೆ ಕ್ರಿಯೆಟ್ ಮಾಡಿಕೊಂಡು ವಂಚನೆ ಮಾಡುತ್ತಿದ್ದ ಜಗನ್ನಾಥ್ (34) ಬಂಧನವಾಗಿದೆ.

30 ವರ್ಷ ಮೇಲ್ಪಟ್ಟ ವಿಚ್ಛೇದನ ಆಗಿರುವ ಯುವತಿಯರನ್ನ ಟಾರ್ಗೆಟ್ ಮಾಡಿ ಸಂಪರ್ಕ ಬೆಳೆಸಿಕೊಳ್ಳುತ್ತಿದ್ದ. ಆಕ್ಸಿಡೆಂಟ್ ಆಗಿದೆ, ಕ್ರೆಡಿಟ್ ಕಾರ್ಡ್ ಬ್ಲಾಕ್ ಆಗಿದೆ, ಸೈಟ್ ಖರೀದಿ ಮಾಡಲಿಕ್ಕೆ ಹಣ ಬೇಕು ಅಂತ ನೆಪ ಹೇಳಿ ಹಣ ಪಡೆದುಕೊಳ್ಳುತ್ತಿದ್ದ.

ಹತ್ತು ಮಂದಿ ಯುವತಿಯರಿಗೆ ವಂಚಿಸಿರುವ ಆರೋಪಿ ಮೂಲತ: ಬಿಜಾಪುರ ಜಿಲ್ಲೆಯವನು. ಸಿವಿಲ್ ಎಂಜಿನಿಯರ್ ಅಂತ ಪರಿಚಯ ಮಾಡಿಕೊಳ್ಳುತ್ತಿದ್ದ ಆರೋಪಿ ವಿರುದ್ದ ಇದುವರೆಗೂ ಮೂರು ಯುವತಿಯರು ದೂರು ದಾಖಲಿಸಿದ್ದಾರೆ. ಬನಶಂಕರಿ, ಹೆಣ್ಣೂರು, ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಕಾರಿನಲ್ಲಿ ಆಕ್ಸಿಡೆಂಟ್ ಆಗಿದ್ದ ಪೊಟೊ ಬಳಸಿ ಹಣ ವಸೂಲಿ ಮಾಡಿದ್ದ ಮೊದಲೆರಡು ಬಾರಿ ಯುವತಿಯರನ್ನ ಭೇಟಿ ಆಗಿ ಮದುವೆಯಾಗುವುದಾಗಿ ನಂಬಿಸ್ತಿದ್ದ ನಂತರ ಬೇರೆ ಬೇರೆ ಕಾರಣ ಹೇಳಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಇಂಜಿನಿಯರ್ ಬಲೆಗೆ ಬಿದ್ದಿದ್ದಾನೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ