Breaking News

ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ‘ಡಬಲ್ ಇಂಜಿನ್’ ಸರ್ಕಾರದ ದೊಡ್ಡ ಸಾಧನೆ: ದಿನೇಶ್ ಗುಂಡೂರಾವ್

Spread the love

ಬೆಂಗಳೂರು : ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ‘ಡಬಲ್ ಇಂಜಿನ್’ ಸರ್ಕಾರದ ದೊಡ್ಡ ಸಾಧನೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ತೆರಿಗೆ ವಿಚಾರವಾಗಿ ಸರಕಾರದ ವಿರುದ್ಧ ಟ್ವೀಟ್ ಮಾಡಿದ ದಿನೇಶ್, ಜನರನ್ನು ತೆರಿಗೆ ವಿಷವರ್ತುಲಕ್ಕೆ ತಳ್ಳಿರುವ ಡಬಲ್ ಇಂಜಿನ್ ಸರ್ಕಾರ, ರಕ್ತ ಹೀರುವ ತಿಗಣೆಯಂತೆ ತೆರಿಗೆ ಹೀರುತ್ತಿದೆ. ದೇಶದ ಜನರಿಗೆ ದರಿದ್ರಭಾಗ್ಯ ಕಲ್ಪಿಸಿದ ಈ ಡಬಲ್ ಇಂಜಿನ್ ಸರ್ಕಾರ ಒಂದು ರೀತಿ ಸ್ಮಶಾನದ ಹೆಣವಿದ್ದಂತೆ ಎಂದು ಹೇಳಿಕೊಂಡಿದ್ದಾರೆ.

ದೇಶದ ಜನ ಮೋದಿಯವರು ಹೇಳುತ್ತಿದ್ದ ‘ಅಚ್ಛೇದಿನ್’ ಪದವನ್ನು ತಪ್ಪಾಗಿ ಅರ್ಥೈಸಿಕೊಂಡು ಬಿಜೆಪಿಗೆ ಅಧಿಕಾರ ನೀಡಿದ್ದರು. ಈಗ ಅದೇ ಜನ ಕೇಂದ್ರ ಸರ್ಕಾರದ ತೆರಿಗೆ ದರೋಡೆ ಕಂಡು, ಅಚ್ಚೇದಿನ್ ಎಂದರೆ ಕನಸಿನಲ್ಲೂ ಬೆಚ್ಚುವಂತಾಗಿದೆ.

ಮೋದಿಯವರಿಗೆ ಅಧಿಕಾರ ಕೊಟ್ಟು,ಹರುಷದ ಕೂಳಿಗಾಗಿ,ವರುಷದ ಕೂಳು ಕಳೆದುಕೊಂಡಂತಾಗಿದೆ ದೇಶದ ಜನರ ಪರಿಸ್ಥಿತಿ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಕಾರ್ಪೊರೇಟ್ ತೆರಿಗೆಗಳನ್ನು ಇಳಿಸಿ,ಆ ಭಾರವನ್ನು ಜನಸಾಮಾನ್ಯರ ಮೇಲೆ ಹೊರಿಸುತ್ತಿದೆ.‌ ಕಾರ್ಪೋರೇಟ್ ಮಿತ್ರ – ಜನಸಾಮಾನ್ಯನ ಶತ್ರುವಾಗಿರುವ ಈ ಕೇಂದ್ರ ಸರ್ಕಾರ ದೇಶದ ಪಾಲಿಗೆ ಹೆಗಲೇರಿದ ಶನಿಯಂತೆ ಎಂದಿದ್ದಾರೆ.

ಜನರನ್ನು ತೆರಿಗೆ ಮೂಲಕ ಹುರಿದು ಮುಕ್ಕುತ್ತಿರುವ ಮೋದಿ ಸರ್ಕಾರಕ್ಕೆ ಜನರ ಹಿತಕ್ಕಿಂತ ಕಾರ್ಪೊರೇಟ್ ಕುಳಗಳ ಹಿತವೇ ಮುಖ್ಯವಾಗಿದೆ.

ಬೆಲೆಯೇರಿಕೆ ದೇಶದ ಜನರಿಗೆ ನರೇಂದ್ರ ಮೋದಿ ಸರ್ಕಾರ ಕೊಟ್ಟ ಶಾಪ. 2 ವರ್ಷದ ಅವಧಿಯಲ್ಲಿ ಕೆಲ ಅಗತ್ಯ ವಸ್ತುಗಳ ಬೆಲೆ ಶೇ 200% ರಷ್ಟು ಏರಿಕೆಯಾಗಿದೆ. ಆದರೆ ಜನರ ಆದಾಯ ಮೊದಲಿಗಿಂತ ಕಡಿಮೆಯಾಗಿದೆ. ಮೋದಿಯವರ ದುಬಾರಿ ದುನಿಯಾದಲ್ಲಿ ಅವರ ಕಾರ್ಪೋರೆಟ್ ಸ್ನೇಹಿತರು ಮಾತ್ರ ಬದುಕಬಹುದು. ಆದರೆ ಜನಸಾಮಾನ್ಯನ ಹೊಟ್ಟೆಗೆ ತಣ್ಣೀರು ಬಟ್ಟೆಯೇ ಗತಿ ಎಂದು ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ