ಬಾಗಲಕೋಟೆ : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜನ ಸಾಮಾನ್ಯರು ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಇಂತಹ ಕಠಿಣ ಸಂದರ್ಭದಲ್ಲಿ ದಿನದಿಂದ ದಿನಕ್ಕೆ ಅಡುಗೆ ಅನೀಲ, ಇಂಧನ, ದಿನ ಬಳಕೆ ವಸ್ತುಗಳ ಬಳಕೆ ದುಪ್ಪಟ್ಟಾಗುತ್ತಿದೆ. ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಆಕ್ರೋಶ ವ್ಯಕ್ತಪಡಿಸಿದರು.
